ಇಲ್ಲಿನ ಸುವರ್ಣ ಸೌಧದ ವಿಧಾನ ಪರಿಷತ್ ಮೊಗಸಾಲೆಯಲ್ಲಿ ಸೋಮವಾರ ನಡೆದ ಈ ಮಾತುಕತೆಯಲ್ಲಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ ಮುಂತಾದ ಪ್ರಮುಖ ಅಂಶಗಳನ್ನು ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಕಂಪನಿಯ ಪರವಾಗಿ ಅದರ ಸಿಇಒ ಅಮರ ಮಲೆತೀರ ಇದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, 'ಕರ್ನಾಟಕವು ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯ ಅತ್ಯುತ್ತಮ ಕಾರ್ಯ ಪರಿಸರ ಹೊಂದಿದೆ. ಜತೆಗೆ ಸರಕಾರದ ನೀತಿಗಳು ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಉತ್ಪಾದನೆಗೆ ಪೂರಕವಾಗಿವೆ. ಇದರ ಜತೆಗೆ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಒದಗಿಸಲು ಸೂಕ್ತ ವ್ಯವಸ್ಥೆ ಇದೆ ಎಂದರು.

ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯಲ್ಲಿ ನೆಲೆಯೂರಿದರೆ ಅಪಾರ ಬಂಡವಾಳ ಹರಿದು ಬರಲಿದ್ದು, ಸ್ಥಳೀಯ ಪ್ರತಿಭಾವಂತರಿಗೆ ಉದ್ಯೋಗದ ಅವಕಾಶಗಳ ಬಾಗಿಲು ತೆರೆಯಲಿದೆ. ಇದರಿಂದ ಅನಗತ್ಯ ವಲಸೆ ತಪ್ಪಿ, ಪ್ರಾದೇಶಿಕ ಅಸಮತೋಲನ ನಿವಾರಣೆಯೂ ಆಗಲಿದೆ ಎಂದು ಅವರು ಹೇಳಿದರು.
[video width="640" height="352" mp4="https://samadarshi.net/otassoos/2022/12/805c83fa-e0b4-4009-b398-8b36ff50c1fe.mp4"][/video]
ಬೆಂಗಳೂರಿನ ಆಚೆಗೂ ಉದ್ಯಮಗಳು ಬರಬೇಕು ಎನ್ನುವುದು ಸರಕಾರದ ನೀತಿಯಾಗಿದೆ. ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯನ್ನು ಆಯ್ದುಕೊಂಡಿರುವುದು ಸ್ವಾಗತಾರ್ಹ ಎಂದರು.
ಚರ್ಚೆಯಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಿಇಒ ಸಂಜೀವ ಗುಪ್ತ ಕೂಡ ಇದ್ದರು.








