ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚಿರತೆ ಸೆರೆಗೆ ಅರಣ್ಯ ಇಲಾಖೆಯ ಮತ್ತೊಂದು ತಂತ್ರಗಾರಿಕೆ

ಬೆಳಗಾವಿ: ನಗರದ ಗಾಲ್ಫ ಮೈದಾನದಲ್ಲಿರುವ ಚಿರತೆಯನ್ನು ಹಿಡಿಯಲು ಹರಸಾಹಸ ಪಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿಯು ಚಿರತೆ ಹಿಡಿಯುವ ಪ್ರಯತ್ನ ಮುಂದುವರಿಸಿದೆ.

ಈಗಾಗಲೇ ಮೂರು ಬಾರಿ ಕಾಣಿಸಿಕೊಂಡಿರುವ ಚಿರತೆಯನ್ನು ಹಿಡಿಯಲು ತಂತ್ರಗಾರಿಕೆ ಹೂಡಿದ್ದಾರೆ. ಸಿದ್ಧಪಡಿಸಿದ ಮಾಸ್ಟರ್ ಪ್ಲಾನ್​ನಂತೆ ಇಂದು 350 ಅರಣ್ಯ ಇಲಾಖೆ ಸಿಬ್ಬಂದಿ ಏಕಕಾಲದಲ್ಲಿ ಕಾರ್ಯಾಚರಣೆಗೆ ಇಳಿಯಲಿದ್ದಾರೆ.

250 ಎಕರೆ ಪ್ರದೇಶದಲ್ಲಿ ಸುಮಾರು 350 ಅರಣ್ಯ ಇಲಾಖೆ ಸಿಬ್ಬಂದಿಗಳು ಏಕಕಾಲದಲ್ಲಿ ಕೋಬಿಂಗ್ ಕಾರ್ಯಾಚರಣೆ ಆರಂಭಿಸಲಿದ್ದಾರೆ. ಕೋಬಿಂಗ್ ಕಾರ್ಯಾಚರಣೆ ಅಂದರೆ, ಒಂದು ಕಡೆಯಲ್ಲಿ ಬಲೆಯನ್ನು ಹಾಕಿ ಇನ್ನೊಂದು ಕಡೆಯಿಂದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿ ಚಿರತೆಯನ್ನು ಬಲೆಗೆ ಹಾಕುವ ಪ್ಲಾನ್ ಅನ್ನು ರೂಪಿಸಿಕೊಂಡಿದ್ದಾರೆ.

ಈಗಾಗಲೇ ಗಾಲ್ಫ ಮೈದಾನದ ತಡೆಗೋಡೆ ಸುತ್ತ ಸುಮಾರು ಮೂರು ಕಿ.ಮೀ. ವರೆಗೆ ಬಲೆಯನ್ನು ಹಾಕಲಾಗಿದೆ. ಹನುಮಾನ ನಗರ, ಜಾಧವ ನಗರ ಭಾಗದ ಕಡೆಗಳಲ್ಲಿ ಸಿಬ್ಬಂದಿ ಚಿರತೆ ಸೆರೆ ಹಿಡಿಯುವ ಬಲೆ ಹಾಕಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.