LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಒಕ್ಕಲಿಗ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಬಿಜೆಪಿ ಸಚಿವ, ಶಾಸಕರ ಮನವಿ

ಬೆಳಗಾವಿ, ೨೩- ರಾಜ್ಯದಲ್ಲಿ ವಿವಿಧ ಸಮುದಾಯಗಳಿಂದ ಮೀಸಲಾತಿಗಾಗಿ ಬೇಡಿಕೆಗಳು ದಿನೇ ದಿನೇ ಹೆಚ್ಚಾಗುತ್ತಿವೆ.  ನಿನ್ನೆ ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿಗಾಗಿ ಬೃಹತ್ ಪ್ರತಿಭಟನೆಯ ನಂತರ ಇಂದು ಶುಕ್ರವಾರ ಒಕ್ಕಲಿಗ ಸಮುದಾಯದವರಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗದಿಂದ ಮನವಿ ಸಲ್ಲಿಸಲಾಯಿತು.



ನಿಯೋಗದಲ್ಲಿ ಸಚಿವರಾದ ಆರ್ ಅಶೋಕ, ಡಾ. ಸಿ. ಎನ್ ಅಶ್ವತ್ಥನಾರಾಯಣ, ಅರಗ ಜ್ಞಾನೇಂದ್ರ, ಕೆ.ಗೋಪಾಲಯ್ಯ, ಎಸ್ ಟಿ ಸೋಮಶೇಖರ, ಸುಧಾಕರ, ಡಾ.ನಾರಾಯಣಗೌಡ ಹಾಗೂ ಶಾಸಕರು ಇದ್ದರು.



ಮನವಿ ಕೊಟ್ಟ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ ಅವರು,  ಒಕ್ಕಲಿಗ ಸಮುದಾಯದ ಒಟ್ಟು ಜನಸಂಖ್ಯೆಗೆ ಹೋಲಿಸಿದರೆ ಶಿಕ್ಷಣ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ನೀಡಿರುವ ಮೀಸಲಾತಿ ಕಡಿಮೆ ಇದ್ದು ಮೀಸಲಾತಿ ಹೆಚ್ಚಳಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು.



ನಾವು ಹೆಚ್ಚು ಮೀಸಲಾತಿ ಕೇಳುತ್ತಿಲ್ಲ, ಜನಸಂಖ್ಯೆಗೆ ತಕ್ಕಂತೆ ಮಾತ್ರ ನೀಡಲು ಕೋರಲಾಗಿದೆ. ಮುಖ್ಯಮಂತ್ರಿಗಳು ಎಲ್ಲಾ ಸಮುದಾಯಗಳ ಅಗತ್ಯವೇನು ಎಂಬುದನ್ನು ಅರಿತಿದ್ದಾರೆ. ಅವರು ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡಲಿದ್ದಾರೆ ಎಂದರು.



ಒಕ್ಕಲಿಗ ಸಮುದಾಯದ ಜನಸಂಖ್ಯೆಗೆ ಹೋಲಿಸಿದರೆ ಶಿಕ್ಷಣ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ನೀಡಿರುವ ಮೀಸಲಾತಿ ಸಾಲುವುದಿಲ್ಲ. ಒಕ್ಕಲಿಗರಲ್ಲಿ ಬಹುತೇಕರು ರೈತರಾಗಿದ್ದು, ದೇಶಕ್ಕೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಇದಕ್ಕಾಗಿ ಮೀಸಲಾತಿ ಹೆಚ್ಚಳಕ್ಕೆ ಕ್ರಮ ವಹಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ