ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುರುಘಾಮಠದ ತಾತ್ಕಾಲಿಕ ಉತ್ತರಾಧಿಕಾರಿ ನೇಮಕ

ಚಿತ್ರದುರ್ಗ: ಮುರುಘಾಮಠದ ಡಾ.ಶಿವಮೂರ್ತಿ ಶರಣರ ಬಂಧನದ ಬೆನ್ನಲ್ಲೇ ಮುರುಘಾಮಠಕ್ಕೆ ತಾತ್ಕಾಲಿಕವಾಗಿ ಉಸ್ತುವಾರಿಯನ್ನಾಗಿ ದಾವಣಗೆರೆಯ ಹೆಬ್ಬಾಳು ಶಾಖಾ ಮಠದ ಮಹಾಂತರುದ್ರ ಸ್ವಾಮೀಜಿಗಳನ್ನು ನೇಮಕ ಮಾಡಲಾಗಿದೆ.

ದಾವಣಗೆರೆ ಜಿಲ್ಲೆಯ ಹೆಬ್ಬಾಳದಲ್ಲಿರುವ ಮುರುಘಾಮಠದ ಶಾಖಾ ಮಠದ ಹಿರಿಯ ಸ್ವಾಮೀಜಿಗಳಾಗಿರುವ ಮಹಾಂತ ರುದ್ರ ಸ್ವಾಮೀಜಿ ಅವರಿಗೆ ಚಿತ್ರದುರ್ಗ ಮಠದ ಎಲ್ಲಾ ಜವಾಬ್ದಾರಿಗಳನ್ನು ಸದ್ಯಕ್ಕೆ ವಹಿಸಲಾಗಿದೆ.

ಮುರುಘಾಮಠದಲ್ಲಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರು ಬರದಂತೆ ಮುಂದಿನ ಗೇಟ್, ಹಿಂದಿನ ಗೇಟ್ ಕೂಡ ಬಂದ್ ಮಾಡಲಾಗಿದೆ. ಕೇವಲ ಮಠದ ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಸದ್ಯ ಭಕ್ತಾದಿಗಳು ಇಲ್ಲದೇ ಮಠದ ಆವರಣ ಖಾಲಿ ಖಾಲಿಯಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.