ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಿಯಾಂಕ ಖರ್ಗೆ ಗುಂಡಿಕ್ಕುವುದಾಗಿ ಹೇಳಿದ್ದ ಬಿಜೆಪಿ ಮುಖಂಡನ ಬಂಧನ  

ಕಲಬುರಗಿ : ಶಾಸಕ ಪ್ರಿಯಾಂಕ ಖರ್ಗೆಯನ್ನು ಗುಂಡಿಟ್ಟು ಕೊಲ್ಲುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡನನ್ನು ಪೊಲೀಸರು ಬಂಧಿಸಿದ್ದಾರೆ.

ನೀವು ಶೂಟ್ ಮಾಡಿ ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ ಎಂದು ಮಣಿಕಂಠ ರಾಠೋಡ ಹೇಳಿದ್ದರು. ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಣಿಕಂಠ ಬಂಧನಕ್ಕಾಗಿ ಕಾಂಗ್ರೆಸ್ ಕೂಡ ಆಗ್ರಹಿಸಿತ್ತು. ಈ ಬಗ್ಗೆ ಕಲಬುರಗಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿತ್ತು. ಭಾನುವಾರ ಮಧ್ಯರಾತ್ರಿ ಹೈದರಾಬಾದ‌ನಲ್ಲಿ ಪೊಲೀಸರು ಬಂಧಿಸಿ ಕಲಬುರಗಿಗೆ ಕರೆ ತಂದಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.