LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ನಕಲಿ ಮೈಕ್ರೋ ಫೈನಾನ್ಸ ರಿಕವರಿ ಎಜೆಂಟರ ಬಂಧನ

ರಾಯಚೂರು: ಮೈಕ್ರೋ ಫೈನಾನ್ಸ ಹಾವಳಿ ಒಂದೆಡೆಯಾದರೆ, ಇನ್ನೊಂದು ಕಡೆ ನಕಲಿ ಸಾಲ ರಿಕವರಿ ತಂಡವೊಂದು ವಸೂಲಿ ದಂಧೆ ನಡೆಸಿರುವುದು ಬೆಳಕಿಗೆ ಬಂದಿದೆ. ಫೈನಾನ್ಸ ಸಾಲ ರಿಕವರಿ ತಂಡದ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ನಾಲ್ವರು ಆರೋಪಿಗಳನ್ನ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.



ಆರೋಪಿಗಳನ್ನು ಫಯಾಜ, ಶೇಖ ಎಂಡಿ ಆಯುಬ, ಸೈಯದ ಶಹಬಾಜ ಅಹ್ಮದ, ಅರೋನ್ ರಸೀದ ಎಂದು ಗುರುತಿಸಲಾಗಿದೆ. ಈ ತಂಡ ಮೊಬೈಲ್ ಆ್ಯಪನಲ್ಲಿ ಫೈನಾನ್ಸಗಳ ಸಾಲ ಬಾಕಿ ಇರುವವರನ್ನ ಗುರುತಿಸಿ, ಟಾರ್ಗೆಟ್ ಮಾಡುತ್ತಿದ್ದರು. ರಸ್ತೆ ಮಧ್ಯದಲ್ಲೇ ಬೈಕ್, ವಾಹನಗಳನ್ನು ಅಡ್ಡಗಟ್ಟಿ ಸಾಲ ತೀರಿಸುವಂತೆ ಬೆದರಿಕೆ ಹಾಕುತ್ತಿದ್ದರು.



ಯಾದಗಿರಿ ಜಿಲ್ಲೆ ಗುಂಡ್ಲೂರಿನ ಸೈಯದ ಬಾಷಾ ಎಂಬುವವರ ಬೊಲೆರೋ ವಾಹನವನ್ನು ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಹಿಡಿದು 12 ಸಾವಿರ ರೂ. ಬೇಡಿಕೆ ಇಟ್ಟು ವಾಹನ ಜಪ್ತಿ ಮಾಡಿದ್ದರು. ಸಾಲ ಮಾಡಿದ್ದ ಫೈನಾನ್ಸ್ ಕಂಪನಿಯಲ್ಲಿ ಸೈಯದ್ ಬಾಷಾ ಕಂತು ಕಟ್ಟಿ ಬಂದಿದ್ದರೂ ವಾಹನ ಬಿಟ್ಟಿರಲಿಲ್ಲ. ಫೈನಾನ್ಸನಲ್ಲಿ ಕಟ್ಟಿದರೆ ಸಾಲಲ್ಲ, ನಮಗೂ ಹಣ ಕೊಡಬೇಕು ಎಂದು ಒತ್ತಾಯಿಸಿದ್ದರು. ಇದರಿಂದ ಅನುಮಾನದ ಮೇಲೆ ಸೈಯದ್ ಬಾಷಾ ಸಹೋದರ ಅಜೀಜ ಅವರು ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.



ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೆಲ ವರ್ಷಗಳಿಂದ ಈ ನಕಲಿ ದಂಧೆಯಲ್ಲಿ ತೊಡಗಿರುವುದು ವಿಚಾರಣೆಯಲ್ಲಿ ತಿಳಿದು ಬಂದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ