LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಎಟಿಎಂನಲ್ಲಿ ಸಹಾಯದ ನೆಪದಲ್ಲಿ ವಂಚಿಸುತ್ತಿದ್ದವನ ಬಂಧನ 

ಚಿಕ್ಕೋಡಿ: ಎಟಿಎಂನಲ್ಲಿ ಹಣ ತೆಗೆಯಲು ಸಹಾಯದ ನೆಪದಲ್ಲಿ ವಂಚನೆ ಮಾಡುತ್ತಿದ್ದ ವ್ಯಕ್ತಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.



ಮಹಾರಾಷ್ಟ್ರ ಮೂಲದ ಅಮುಲ್ ದಿಲೀಪ್ ಸಖಟೆ (30) ಬಂಧಿತ ಆರೋಪಿ. ಬಂಧಿತ ಆತನ ಬಳಿಯಿದ್ದ 51 ವಿವಿಧ ಬ್ಯಾಂಕ್​ಗಳ ಎಟಿಎಂ ಕಾರ್ಡ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.



ಬೆಳಗಾವಿ ಜಿಲ್ಲೆಯ ಅಥಣಿ, ಚಿಕ್ಕೋಡಿ, ಗೋಕಾಕ್ ಹಾಗೂ ಬಾಗಲಕೋಟೆ ಸೇರಿದಂತೆ ಇತರ ರಾಜ್ಯಗಳಲ್ಲಿನ ಎಟಿಎಂನಲ್ಲಿ ಹಣ ತೆಗೆಯುವಾಗ ಸಹಾಯ ಮಾಡುವುದಾಗಿ ಹೇಳಿ, ಬಳಿಕ ಎಟಿಎ ಕಾರ್ಡ್ ಬದಲಿಸಿ ವಂಚನೆ ಮಾಡುತ್ತಿದ್ದನು.



ಇತ್ತೀಚಿಗೆ ಚಿಕ್ಕೋಡಿ ಪಟ್ಟಣದಲ್ಲಿ ವಿಜಯ ರಾಣಪ್ಪಾ ಡಾಲೆ ಎಂಬುವರಿಗೆ ಆರೋಪಿ ಸಹಾಯ ಮಾಡುವ ರೂಪದಲ್ಲಿ ಮಕ್ಮಲ್​ ಟೋಪಿ ಹಾಕಿದ್ದ.



ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ