ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುರುಘಾಮಠ ಸ್ವಾಮಿಗಳ ಬಂಧನ

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆಗೆ ಅಜ್ಞಾತ ಸ್ಥಳಕ್ಕೆ ಪೊಲೀಸರು ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಮಠದ ಹಾಸ್ಟೇಲಿನ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೊಕ್ಸೊ ಪ್ರಕರಣ ದಾಖಲಾದ ಆರು ದಿನಗಳ ಬಳಿಕ ಇದೀಗ ಚಿತ್ರದುರ್ಗ ಪೊಲೀಸರು ಡಾ.ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿದ್ದಾರೆ. ಆಗಸ್ಟ 26ರಂದು ಮೈಸೂರಿನ ನಜರಾಬಾದ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥರು ದೂರು ದಾಖಲಿಸಿದ್ದರು.

ಗುರುವಾರ ಎರಡನೇ ಆರೋಪಿಯಾದ ಹಾಸ್ಟೇಲ್ ವಾರ್ಡನ್ ರಶ್ಮಿ ಅವರ ವಿಚಾರಣೆ ನಡೆದ ಬಳಿಕ ಶ್ರೀಗಳ ಬಂಧನ ಮಾಡಲಾಗಿದೆ.

'ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಬಂಧನವಾಗಿದೆ. ಕಾರ್ಯವಿಧಾನದ ಪ್ರಕಾರ ವೈದ್ಯಕೀಯ ಪರೀಕ್ಷೆ ಮತ್ತು ತನಿಖೆಯನ್ನು ಮಾಡಲಾಗುತ್ತದೆ. ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಎಡಿಜಿಪಿ ಅಲೋಕ ಕುಮಾರ ಅವರು ಮಾಹಿತಿ ನೀಡಿದ್ದಾರೆ.

ಶ್ರೀಗಳ ಬಂಧನ ಹಿನ್ನಲೆಯಲ್ಲಿ ಎಲ್ಲ ಕಡೆ ಬಿಗಿ ಬಂದೋಬಸ್ತ‌ ಮಾಡಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.