LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸವದತ್ತಿ; ಭೀಕರ ಅಪಘಾತ : ಎಎಸ್​ಐ ಪತ್ನಿ ಸೇರಿದಂತೆ ನಾಲ್ವರ ಸಾವು

ಸವದತ್ತಿ: ಕಾರು ಮತ್ತು ಬೈಕ್​ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ.



ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು ಚಾಲಕ ನಿಖಿಲ ಕದಂ(24), ಬೈಕ್​ನಲ್ಲಿದ್ದ ವೃದ್ಧೆ ಹನುಮವ್ವಾ ಚಿಕ್ಕಲಕಟ್ಟಿ ಮೃತ ದುರ್ದೈವಿಗಳು. ಕುಡಚಿ ಪೊಲೀಸ್​ ಠಾಣೆಯ ಎಎಸ್​ಐ ವೈ.ಎಂ.ಹಲಕಿರವರ ಪತ್ನಿ ರುಕ್ಮಿಣಿ ಸಾವನ್ನಪ್ಪಿದ್ದಾರೆ.



ಬೆಳಗಾವಿ-ಬಾಗಲಕೋಟ ರಸ್ತೆಯ ಬೂದಿಗೊಪ್ಪ ಕ್ರಾಸ್​ನಲ್ಲಿ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಬೆಳಗಾವಿಯತ್ತ ಬರುತ್ತಿತ್ತು.ಈ ವೇಳೆ ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್​ಗೆ ಅದು ಢಿಕ್ಕಿ ಹೊಡೆದಿದೆ.



ಸ್ವಿಫ್ಟ್​ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.



ಸ್ಥಳಕ್ಕೆ ಎಸ್‌ಪಿ ಡಾ.ಸಂಜೀವ ಪಾಟೀಲ ಅವರು ಭೇಟಿ ನೀಡಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ