ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸವದತ್ತಿ; ಭೀಕರ ಅಪಘಾತ : ಎಎಸ್​ಐ ಪತ್ನಿ ಸೇರಿದಂತೆ ನಾಲ್ವರ ಸಾವು

ಸವದತ್ತಿ: ಕಾರು ಮತ್ತು ಬೈಕ್​ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ.

ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು ಚಾಲಕ ನಿಖಿಲ ಕದಂ(24), ಬೈಕ್​ನಲ್ಲಿದ್ದ ವೃದ್ಧೆ ಹನುಮವ್ವಾ ಚಿಕ್ಕಲಕಟ್ಟಿ ಮೃತ ದುರ್ದೈವಿಗಳು. ಕುಡಚಿ ಪೊಲೀಸ್​ ಠಾಣೆಯ ಎಎಸ್​ಐ ವೈ.ಎಂ.ಹಲಕಿರವರ ಪತ್ನಿ ರುಕ್ಮಿಣಿ ಸಾವನ್ನಪ್ಪಿದ್ದಾರೆ.

ಬೆಳಗಾವಿ-ಬಾಗಲಕೋಟ ರಸ್ತೆಯ ಬೂದಿಗೊಪ್ಪ ಕ್ರಾಸ್​ನಲ್ಲಿ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಬೆಳಗಾವಿಯತ್ತ ಬರುತ್ತಿತ್ತು.ಈ ವೇಳೆ ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್​ಗೆ ಅದು ಢಿಕ್ಕಿ ಹೊಡೆದಿದೆ.

ಸ್ವಿಫ್ಟ್​ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಎಸ್‌ಪಿ ಡಾ.ಸಂಜೀವ ಪಾಟೀಲ ಅವರು ಭೇಟಿ ನೀಡಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.