LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರೈತರ ಜಮೀನು ಕಬಳಿಸುವ ಯತ್ನ: ಆರ್‌.ಅಶೋಕ ಆರೋಪ

ಬೆಂಗಳೂರು, ಜೂನ್ 13 : ರೈತರ ಜಮೀನಿನ ಮೇಲೆ ಬುಲ್ಡೋಜರ್ ಓಡಿಸಿ ರಿಯಲ್ ಎಸ್ಟೇಟ್ ಸಾಮ್ರಾಜ್ಯ ಕಟ್ಟಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸುಮಾರು 470 ದಿನಗಳಿಂದ ರೈತರು ನಡೆಸುತ್ತಿರುವ ಹೋರಾಟ, ಕಣ್ಣೀರು ಹಾಗೂ ಆಕ್ರೋಶವನ್ನು ಲೆಕ್ಕಿಸದೆ ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ 499 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅಂತಿಮ ಅಧಿಸೂಚನೆ ಹೊರಡಿಸಿರುವುದು ಸರ್ಕಾರದ ನಿಜವಾದ ಮುಖವನ್ನು ಬಯಲು ಮಾಡಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದ ರೈತರನ್ನು ದುರ್ಬಲರೆಂದು ಭಾವಿಸಿದ್ದರೆ ಅದು ಸರ್ಕಾರದ ದೊಡ್ಡ ತಪ್ಪು. ಇನ್ನೂ ಒಂದೂವರೆ ವರ್ಷದಲ್ಲಿ ಜನವಿರೋಧಿ ಸರ್ಕಾರ ಇತಿಹಾಸದ ಪುಟ ಸೇರಲಿದೆ. 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಈ ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಪಡಿಸಲಾಗುವುದು. ರೈತರಿಗೆ ನೀಡಿರುವ ಭರವಸೆಯನ್ನು ನಾವು ಉಳಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ರೈತರ ತೀವ್ರ ವಿರೋಧದ ನಡುವೆಯೂ ಭೂಸ್ವಾಧೀನಕ್ಕೆ ಸರ್ಕಾರ ಆತುರ ತೋರುತ್ತಿರುವುದರ ಹಿಂದೆ ಏನು ಕಾರಣ ಎಂಬ ಪ್ರಶ್ನೆ ಎತ್ತಿರುವ ಅವರು, ಬಿಲ್ಡರ್‌ಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಇದಕ್ಕೆ ಕಾರಣವಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಕಸ ವಿಲೇವಾರಿ ಗುತ್ತಿಗೆ ಸೇರಿದಂತೆ ವಿವಿಧ ವಿಚಾರಗಳಲ್ಲಿ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ. ಈಗ ರೈತರ ಜಮೀನಿನ ಮೇಲೂ ಕಣ್ಣಿಟ್ಟಿರುವ ಸರ್ಕಾರ ಅಭಿವೃದ್ಧಿಯ ಹೆಸರಿನಲ್ಲಿ ರೈತರ ಬದುಕಿಗೆ ಹೊಡೆತ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

499 ಎಕರೆ ಜಮೀನಿನ ವಿಚಾರ ಕೇವಲ ಭೂಮಿಯ ಹೋರಾಟವಲ್ಲ, ರೈತರ ಹಕ್ಕು, ಗೌರವ ಹಾಗೂ ಬದುಕಿನ ಪ್ರಶ್ನೆಯಾಗಿದೆ. ಸರ್ಕಾರ ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಹಿಂಪಡೆಯಬೇಕು. ಇಲ್ಲವಾದರೆ ರೈತರ ಆಕ್ರೋಶದ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಆರ್‌.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬಿಡೊಲ್ಲ: ರಾಜನಾಥ ಸಿಂಗ್ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ ಸೇಠ್; ಜು.1ರಿಂದ ಅಧಿಕಾರ ಸ್ವೀಕಾರಪರಾರಿ ನೀರವ ಮೋದಿ ಪ್ರಕರಣಕ್ಕೆ ತಿರುವು: ಭ್ರಷ್ಟಾಚಾರದ ಸಾಕ್ಷ್ಯ ಇಲ್ಲ ಎಂದ ಸಿಬಿಐನೀಟ್ ಅಕ್ರಮ, ನಿರುದ್ಯೋಗ ವಿರುದ್ಧ ಕಾಂಗ್ರೆಸ್ ರಣಕಹಳೆ: ರಾಹುಲ್ ನೇತೃತ್ವದಲ್ಲಿ ವಿದ್ಯಾರ್ಥಿ ಸಮಾವೇಶಜೀವ ಕಳೆದುಕೊಂಡ ನಾವಿಕರು, ಧ್ವನಿ ಕಳೆದುಕೊಂಡ ನಾಯಕತ್ವಭಾರತೀಯ ನಾವಿಕರ ಹತ್ಯೆಯ ಕಾವಿನ ನಡುವೆ ಫ್ರಾನ್ಸ, ಸ್ಲೋವೇಕಿಯಾ ದೇಶಗಳ ೧ ವಾರದ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿರೈತರ ಜಮೀನು ಕಬಳಿಸುವ ಯತ್ನ: ಆರ್‌.ಅಶೋಕ ಆರೋಪ4 ಗೋಲುಗಳ ದಾಳಿಯಿಂದ ಅಮೆರಿಕದ ಶುಭಾರಂಭಮಣಿಪುರದಲ್ಲಿ ದಿಗ್ಬಂಧನ: ಪೆಟ್ರೋಲ್ ₹230, ಅಡುಗೆ ಅನಿಲ ₹5,000ಕಾಗದದ ಕಡತಗಳಿಗೆ ವಿದಾಯ: ಪಾಲಿಕೆ ಪಿಐಡಿ ಸೇವೆ ಸಂಪೂರ್ಣ ಆನ್‌ಲೈನ್‌ಗೆ