ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರೈತರ ಪ್ರತಿಭಟನೆ : ನ.11ರ ವರೆಗೆ ಮದ್ಯ ಮಾರಾಟ ನಿಷೇಧ

ಬಾಗಲಕೋಟ: ಜಿಲ್ಲೆಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ರೈತರು ಪ್ರತಿಭಟನೆ ಮಾಡುತ್ತಿದ್ದು, ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ.

ಇಂದು ಮದ್ಯಾಹ್ನ 2 ಗಂಟೆಯಿಂದ ರಿಂದ ನವೆಂಬರ 11ರ ಮಧ್ಯರಾತ್ರಿ 12 ಗಂಟೆವರೆಗೆ ಜಮಖಂಡಿ, ಮುಧೋಳ ಹಾಗೂ ರಬಕವಿ-ಬನಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಹಾಗೂ ಸಾಗಾಣಿಕೆ ನಿಷೇಧಿಸಿ ಬಾಗಲಕೋಟ ಜಿಲ್ಲಾಧಿಕಾರಿ ಪಿ ಸುನಿಲ ಕುಮಾರ ಆದೇಶ ಹೊರಡಿಸಿದ್ದಾರೆ.

ಕಳೆದ ಎರಡು ದಿನದ ಹಿಂದೆ ರೈತರು ಸಮೀರವಾಡಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿದ್ದರು. ಈ ವೇಳೆ ಕಾರ್ಖಾನೆ ಕಚೇರಿ ಕಿಡಕಿ ಗಾಜು ಧ್ವಂಸಗೊಳಿಸಿದ್ದರು. ಬಾಗಲಕೋಟದಲ್ಲಿ ಪ್ರತಿಭಟನೆಯ ಕಾವು ಜೋರಾಗಿದ್ದು, ಇಂದು ಕೂಡ ಪ್ರತಿಭಟನೆ ಮುಂದುವರೆದಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.