LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕತ್ತು ಕೊಯ್ದು ವ್ಯಾಪಾರಿಯ ಬರ್ಬರ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಆಳಂದ ಬಸ್ ನಿಲ್ದಾಣದ ಬಳಿ ಕತ್ತು ಕೊಯ್ದು ಮುಸ್ಲಿಮ ವ್ಯಾಪಾರಿಯ ಬರ್ಬರ ಹತ್ಯೆ ಮಾಡಲಾಗಿದೆ.



ಆಳಂದ ರೇವಣಸಿದ್ದೇಶ್ವರ ಕಾಲೋನಿ ನಿವಾಸಿ ಕರೀಂಲಾಲ ಬಾಗವಾನ್(25) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಜಗಳ ಬಿಡಿಸಲು ಹೋಗಿದ್ದ ಸಹೋದರ ಜುಬೇರಗೂ ಗಾಯಗಳಾಗಿವೆ. ಹಣ್ಣಿನ ವ್ಯಾಪಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದು ಹತ್ಯೆಯಾಗಿರುವ ಶಂಕೆ ಇದೆ. ಸಂಬಂಧಿಯಿಂದಲೇ ಕೊಲೆ ನಡೆದಿದೆ ಎನ್ನಲಾಗಿದೆ.



ಯುವತಿ ವಿಚಾರಕ್ಕೆ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ನಂತರ ಇಬ್ಬರ ಕಡೆಯವರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಜಗಳದ ವೇಳೆ ಚಾಕುವಿನಿಂದ ಇರಿಯಲಾಗಿದೆ ಎಂದೂ ಹೇಳಲಾಗಿದೆ.



ಆಳಂದ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ