ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಂಗಳೂರಿಗೆ ತೆರಳುವ ಮುನ್ನ ʼಕುಕ್ಕರ್‌ ಬಾಂಬ್‌ʼ ಹಿಡಿದು ಫೋಟೋ

ಬೆಂಗಳೂರು, ೨೧- ಮಂಗಳೂರಿನಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಪೋಟದ ಕುರಿತು ಪೊಲೀಸರ ತನಿಖೆ ವೇಳೆ ಒಂದೊಂದು ಶಾಕಿಂಗ್‌ ಸಂಗತಿಗಳು ಬಹಿರಂಗವಾಗುತ್ತಿವೆ. ಮೈಸೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಾರೀಕ‌ ಅಲ್ಲಿಯೇ ಬಾಂಬ್‌ ತಯಾರಿಸಿಕೊಂಡು ಮಂಗಳೂರಿಗೆ ಬಂದಿದ್ದ ಎನ್ನಲಾಗಿದೆ.

ಮೈಸೂರಿನ ಈತನ ಬಾಡಿಗೆ ಮನೆಯನ್ನು ಪೊಲೀಸರು ಪರಿಶೀಲಿಸಿದ ವೇಳೆ, ಕುಕ್ಕರ್‌, ಬ್ಯಾಟರಿ, ನಟ್‌ ಬೋಲ್ಟ್‌, ವೈರ್‌ ಮೊದಲಾದ ವಸ್ತುಗಳು ಸಿಕ್ಕಿದ್ದು, ಎಲ್ಲಕ್ಕಿಂತ ಮುಖ್ಯವಾಗಿ ಈತ ಮಂಗಳೂರಿಗೆ ತೆರಳುವ ಮುನ್ನ ಕುಕ್ಕರ್‌ ಬಾಂಬ್‌ ಕೈಯಲ್ಲಿಡಿದು ಫೋಟೋಗೆ ಪೋಸ್‌ ನೀಡಿದ್ದ ಎನ್ನಲಾಗಿದೆ.

ಶಾರೀಕ‌ಗೆ ಅಂತರಾಷ್ಟ್ರೀಯ ಉಗ್ರ ಸಂಘಟನೆಗಳ ಸಂಪರ್ಕವಿರುವ ಶಂಕೆಯೂ ವ್ಯಕ್ತವಾಗುತ್ತಿದ್ದು, ಆತ ಮಂಗಳೂರಿನ ಯಾವ ಸ್ಥಳವನ್ನು ಗುರಿಯಾಗಿಸಿಕೊಂಡಿದ್ದ ಎಂಬ ಸಂಗತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಆತನ ವಿಚಾರಣೆ ಬಳಿಕ ಮತ್ತಷ್ಟು ಸ್ಪೋಟಕ ಸಂಗತಿಗಳು ಬಹಿರಂಗವಾಗಲಿವೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.