ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಳ್ಳಕ್ಕೆ ಉರುಳಿ ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಬಳಿ ಈ ಅಪಘಾತ ಸಂಭವಿಸಿದೆ. ಬಸ್ ಒಳಗೆ ಸಿಲುಕಿದ್ದ ಓರ್ವ ಪ್ರಯಾಣಿಕ ಬಸ್ ನಲ್ಲೇ ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. 25 ಪ್ರಯಾಣಿಕರನ್ನು ರಕ್ಷಿಸಲಾಗಿದೆ .
ಗಾಯಾಳು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಲ್ಲಿ ಸಿಲುಕಿ ಸಾವನ್ನಪ್ಪಿರುವ ಪ್ರಯಾಣಿಕನ ಮೃತದೇಹವನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಘಟನೆ ನಡೆದಿದೆ.








