ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಜಾರಕಿಹೊಳಿ ಬಣಕ್ಕೆ ಭರ್ಜರಿ ಮುನ್ನಡೆ

ಬೆಳಗಾವಿ:

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಮೇಶ್ ಕತ್ತಿ ಬಣಕ್ಕೆ ಬಹುದೊಡ್ಡ ಪ್ರಮಾಣದಲ್ಲಿ ಹಿನ್ನಡೆ ಆಗಿದೆ. ಜಾರಕಿಹೊಳಿ ಬಣದ 6 ಜನರು ನಿರ್ದೇಶಕ ಸ್ಥಾನಕ್ಕೆ ಅವರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಳಗಾವಿ ಡಿಸಿಸಿ ಬ್ಯಾಂಕ್ ನ 16 ನಿರ್ದೇಶಕ ಸ್ಥಾನಗಳ ಪೈಕಿ ಜಾರಕಿಹೊಳಿ ಬಣದ 6 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ.

ಚಿಕ್ಕೋಡಿಯಿಂದ ಗಣೇಶ ಹುಕ್ಕೇರಿ, ಯರಗಟ್ಟಿಯಿಂದ ವಿಶ್ವಾಸ ವೈದ್ಯ, ಮೂಡಲಗಿಯಿಂದ ನೀಲಕಂಠ, ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಗೋಕಾಕನಿಂದ ರಮೇಶ ಜಾರಕಿಹೊಳಿ ಪುತ್ರ ಅಮರನಾಥ, ಬೆಳಗಾವಿಯಿಂದ ಸತೀಶ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ನಿರ್ದೇಶಕ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿರುವ ಅಭ್ಯರ್ಥಿಗಳು.

ಅಕ್ಟೋಬರ್ 13ರಂದು ಚುನಾವಣಾ ಅಧಿಕಾರಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.