LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಬೆಳಗಾವಿ-ಮೀರಜ್ ವಿಶೇಷ ಎಕ್ಸ್ ಪ್ರೆಸ್ ಪ್ಯಾಸೆಂಜರ್ ರೈಲು ಪ್ಯಾಸೆಂಜರ್ ರೈಲಾಗಿ ಪರಿವರ್ತನೆ-ಈರಣ್ಣ ಕಡಾಡಿ

ಬೆಳಗಾವಿ: ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಮೀರಜ್ ನಡುವೆ ಪ್ರತಿದಿನ ಸಂಚರಿಸುತ್ತಿದ್ದ ವಿಶೇಷ ಎಕ್ಸ್ ಪ್ರೆಸ್ ಪ್ಯಾಸೆಂಜರ್ ರೈಲನ್ನು ಪ್ಯಾಸೆಂಜರ್ ರೈಲಾಗಿ ಬದಲಾವಣೆ ಮಾಡಿ ಕೇಂದ್ರ ರೈಲ್ವೆ ಮಂಡಳಿ ಆದೇಶಿಸಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.



ಗುರುವಾರ ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಕರೋನಾ ಸಂದರ್ಭದಲ್ಲಿ ಬೆಳಗಾವಿ- ಮಿರಜ್ ಪ್ಯಾಸೆಂಜರ್ ರೈಲು ಸಂಚಾರವನ್ನು ನಿಲ್ಲಿಸಲಾಗಿತ್ತು. ನನ್ನ ಪ್ರಯತ್ನ ಫಲವಾಗಿ ಕಳೆದ ಎರಡು ವರ್ಷದಿಂದ ವಿಶೇಷ ಎಕ್ಸ್ ಪ್ರೆಸ್ ಪ್ಯಾಸೆಂಜರ್ ರೈಲು ಸಂಚರಿಸುತ್ತಿದೆ. ಈಗ ಪ್ರತಿದಿನ ಪ್ಯಾಸೆಂಜರ್ ರೈಲಾಗಿ ಸಂಚರಿಸಲಿದೆ. ಇದರಿಂದ ಟಿಕೆಟ್ ಬೆಲೆ ಕಡಿತಗೊಂಡು, ಉದ್ಯೋಗಿಗಳು, ಕಾರ್ಮಿಕರು, ವಿದ್ಯಾರ್ಥಿಗಳು, ವೈದ್ಯಕೀಯ ಚಿಕಿತ್ಸೆಗಾಗಿ ಬರುವವರಿಗೆ ಅನುಕೂಲಕರವಾಗಲಿದೆ ಎಂದರು.

ರೈಲಿನ ಸಮಯ ಬೆಳಗ್ಗೆ 05.45 ಕ್ಕೆ ಬೆಳಗಾವಿಯಿಂದ ಹೊರಟು ಮುಂಜಾನೆ 09.00 ಗಂಟೆಗೆ ಮಿರಜ್ ತಲುಪಲಿದೆ. ಮಿರಜ್ ನಿಂದ ಮು.09.55 ಕ್ಕೆ ಹೊರಟು ಮಧ್ಯಾಹ್ನ 01.00 ಗಂಟೆಗೆ ಬೆಳಗಾವಿಗೆ ತಲುಪಲಿದೆ ಮತ್ತು ಮಧ್ಯಾಹ್ನ 01.30 ಕ್ಕೆ ಬೆಳಗಾವಿಯಿಂದ ಹೊರಟು ಸಂಜೆ 04.30 ಗಂಟೆಗೆ ಮಿರಜ್ ತಲುಪಲಿದೆ. ಮಿರಜ್ ನಿಂದ ರಾತ್ರಿ 07.10 ಕ್ಕೆ ಹೊರಟು ರಾತ್ರಿ 10.25 ಗಂಟೆಗೆ ಬೆಳಗಾವಿಗೆ ತಲುಪಲಿದೆ. ಪ್ರತಿದಿನ ಎರಡು ಟ್ರಿಪ್ ಸಂಚರಿಸಲಿದೆ ಎಂದರು.

ನನ್ನ ಮನವಿಗೆ ಸ್ಪಂದಿಸಿ, ಬೆಳಗಾವಿ-ಮೀರಜ್ ಪ್ಯಾಸೆಂಜರ್ ರೈಲಾಗಿ ಆದೇಶ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ಹಾಗೂ ನೈರುತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಈ ಭಾಗದ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಗುವುದು ಎಂದು ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ