LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ರೈಲಿನಲ್ಲಿ ಭಿಕ್ಷಾಟನೆ, ಧೂಮಪಾನ, ಅನಧಿಕೃತ ವ್ಯಾಪಾರಕ್ಕೆ ಭಾರಿ ದಂಡ!

ಹೊಸದಿಲ್ಲಿ, ಜುಲೈ 2: ರೈಲುಗಳಲ್ಲಿ ಪ್ರಯಾಣಿಕರ ಸುರಕ್ಷತೆ, ಸ್ವಚ್ಛತೆ ಮತ್ತು ಶಿಸ್ತನ್ನು ಕಾಪಾಡುವ ಉದ್ದೇಶದಿಂದ ಭಾರತೀಯ ರೈಲ್ವೆ ಧೂಮಪಾನ, ಭಿಕ್ಷಾಟನೆ ಹಾಗೂ ಅನಧಿಕೃತ ವ್ಯಾಪಾರದ ವಿರುದ್ಧ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಹೊಸ ನಿಯಮಗಳ ಪ್ರಕಾರ ರೈಲು ಅಥವಾ ರೈಲು ನಿಲ್ದಾಣಗಳಲ್ಲಿ ಇಂತಹ ಕೃತ್ಯಗಳಲ್ಲಿ ತೊಡಗಿದರೆ ₹2,000 ದಂಡ ವಿಧಿಸಲಾಗುತ್ತದೆ.

ರೈಲಿನಲ್ಲಿ ಸಿಗರೇಟ್ ಅಥವಾ ಇತರೆ ಯಾವುದೇ ರೀತಿಯ ಧೂಮಪಾನ ನಡೆಸಿದರೆ ₹2,000 ದಂಡ ವಿಧಿಸಲಾಗುತ್ತದೆ. ದಂಡ ಪಾವತಿಸಲು ನಿರಾಕರಿಸಿದರೆ ಪ್ರಕರಣವನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗುತ್ತದೆ. ನ್ಯಾಯಾಲಯವು ಪರಿಸ್ಥಿತಿಯನ್ನು ಪರಿಗಣಿಸಿ ಗರಿಷ್ಠ ₹5,000 ದಂಡ ವಿಧಿಸುವ ಅಧಿಕಾರ ಹೊಂದಿದೆ.

ರೈಲುಗಳಲ್ಲಿ ಅಥವಾ ರೈಲು ನಿಲ್ದಾಣಗಳಲ್ಲಿ ಅಗತ್ಯ ಪರವಾನಗಿ ಇಲ್ಲದೆ ಯಾವುದೇ ವಸ್ತುಗಳನ್ನು ಮಾರಾಟ ಮಾಡುವ ಅನಧಿಕೃತ ವ್ಯಾಪಾರಿಗಳ ಮೇಲೂ ₹2,000 ದಂಡ ವಿಧಿಸಲಾಗುತ್ತದೆ. ಈ ಕ್ರಮದಿಂದ ಅನಧಿಕೃತ ವ್ಯಾಪಾರವನ್ನು ನಿಯಂತ್ರಿಸುವುದು ರೈಲ್ವೆಯ ಉದ್ದೇಶವಾಗಿದೆ.

ರೈಲು ಅಥವಾ ರೈಲು ನಿಲ್ದಾಣಗಳಲ್ಲಿ ಭಿಕ್ಷಾಟನೆ ನಡೆಸಿದರೆ ₹2,000 ದಂಡ ವಿಧಿಸಲಾಗುತ್ತದೆ. ಪ್ರಕರಣ ನ್ಯಾಯಾಲಯಕ್ಕೆ ಹೋದರೆ ಗರಿಷ್ಠ ಮೂರು ತಿಂಗಳ ಜೈಲು ಶಿಕ್ಷೆ, ₹5,000 ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ. ಒಂದೇ ರೀತಿಯ ಅಪರಾಧವನ್ನು ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಬಾರಿ ಪುನರಾವರ್ತಿಸುವವರ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಂತಹವರಿಗೆ ಗರಿಷ್ಠ ಒಂದು ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ.

ಈ ಹೊಸ ನಿಯಮಗಳ ಮೂಲಕ ರೈಲುಗಳಲ್ಲಿ ಪ್ರಯಾಣಿಕರಿಗೆ ಸುರಕ್ಷಿತ, ಸ್ವಚ್ಛ ಮತ್ತು ಶಿಸ್ತುಬದ್ಧ ವಾತಾವರಣ ಕಲ್ಪಿಸುವುದು ಭಾರತೀಯ ರೈಲ್ವೆಯ ಪ್ರಮುಖ ಉದ್ದೇಶವಾಗಿದೆ ಎನ್ನಲಾಗಿದೆ. ರೈಲುಗಳಲ್ಲಿ ಧೂಮಪಾನ ಹಾಗೂ ಭಿಕ್ಷಾಟನೆಗೆ ದಂಡ ವಿಧಿಸುವ ಕ್ರಮ ಪ್ರಯಾಣಿಕರ ಸುರಕ್ಷತೆ ಮತ್ತು ಶಿಸ್ತಿನ ದೃಷ್ಟಿಯಿಂದ ಸಮರ್ಥನೀಯವಾಗಿದೆ. ಆದರೆ ಜೀವನೋಪಾಯಕ್ಕಾಗಿ ರೈಲುಗಳಲ್ಲಿ ಸಣ್ಣಪುಟ್ಟ ವಸ್ತುಗಳನ್ನು ಮಾರಾಟ ಮಾಡುವ ಬಡ ವ್ಯಾಪಾರಿಗಳ ಮೇಲೂ ಅದೇ ರೀತಿಯ ಕಠಿಣ ದಂಡ ವಿಧಿಸುವುದು ನ್ಯಾಯಸಮ್ಮತವೇ ಎಂಬ ಪ್ರಶ್ನೆ ಮೂಡಿದೆ. ಒಂದೆಡೆ ಅದಾನಿಗೆ ಕೇವಲ ೧ ರೂಪಾಯಿಗೆ ಎಕರೆಯಂತೆ ಸಾವಿರಾರು ಎಕರೆ ಅರಣ್ಯ ಭೂಮಿ ಗಣಿಗಾರಿಕೆ ನಡೆಸಲು ಕೊಡುತ್ತದೆ,  ಮತ್ತೊಂದೆಡೆ ಹೊಟ್ಟೆಪಾಡಿಗಾಗಿ ಸಣ್ಣ ವ್ಯಾಪಾರ ಮಾಡುವ ಬಡವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿರುವುದು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಚರ್ಚೆಗೆ ಗ್ರಾಸವಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರದ ವೈಫಲ್ಯ ಬಯಲಿಗೆಳೆಯಲು ಸೆ. 1ರಿಂದ ಬಿಜೆಪಿ ಪಾದಯಾತ್ರೆ: ವಿಜಯೇಂದ್ರಜನರ ಆರೋಗ್ಯಕ್ಕಿಂತ ಆಹಾರ ಕಂಪನಿಗಳ ಲಾಬಿ ಮೇಲು! ‘ರೆಡ್‌ ಅಲರ್ಟ್‌’ ಲೇಬಲ್‌ ಪ್ರಸ್ತಾವದಿಂದ ಹಿಂದೆ ಸರಿದ ಸರ್ಕಾರಎಸ್‌ಐಆರ್‌ ಕರಡು ಪಟ್ಟಿಗೆ ನಾಗರಿಕ ಸಂಘಟನೆಗಳ ವಿರೋಧ; ಸೆಪ್ಟೆಂಬರ್‌ 1ರಂದು ಚುನಾವಣಾ ಆಯೋಗ ಚಲೋಅವಧಿ ಮೀರಿದ ಚಾಕೊಲೇಟ್‌ಗಾಗಿ ಕಸದ ರಾಶಿಗೆ ಮುಗಿಬಿದ್ದ ಜನ; ವಿಡಿಯೊ ವೈರಲ್ಅತ್ಯಾಚಾರಿ ಗುರ್ಮೀತ್ ಸಿಂಗ್‌ಗೆ ಮತ್ತೆ ಪೆರೋಲ್; 17ನೇ ಬಾರಿ ಜೈಲಿನಿಂದ ಹೊರಗೆಆಹಾರ ಧಾನ್ಯವನ್ನು ಕಡಿಮೆ ದರದಲ್ಲಿ ನೀಡಿ ಎಥೆನಾಲ್‌ ಖರೀದಿ: ಕೇಂದ್ರದ ವಿಚಿತ್ರ ನೀತಿಗೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆಪಾಟ್ನಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಪೊಲೀಸರೊಂದಿಗೆ ಘರ್ಷಣೆಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್’ ಸೀರತ್ ಅಭಿಯಾನದೆಹಲಿಯಲ್ಲಿ ರಸ್ತೆ ಅಪಘಾತ: ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಸೇರಿ ಆರು ಮಂದಿಗೆ ಗಾಯಶಾಲೆ ಸರಿಪಡಿಸುವ ಹೋರಾಟಕ್ಕೆ ಹಿಂಸೆಯ ಉತ್ತರ! ರಾಜಸ್ಥಾನದಲ್ಲಿ ಸಿಜೆಪಿ ತಂಡದ ಮೇಲೆ ದಾಳಿ