LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ: ಪ್ರಿಯಾಂಕ್ ಖರ್ಗೆ

‘ಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ’: ಪ್ರಿಯಾಂಕ್ ಖರ್ಗೆ

ಕಲಬುರಗಿ, ಸೆ 1 : (ಸಮದರ್ಶಿ ಸುದ್ದಿ) - ಕೆಪಿಎಸ್‌ಸಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿಕೆಟ್ ಬೀಳಲಿದೆ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ–ಜೆಡಿಎಸ್ ನಾಯಕರು ಹಾಕುವ ನೋಬಾಲ್ ಮತ್ತು ಫುಲ್‌ಟಾಸ್‌ಗಳಿಂದ ತಮ್ಮ ವಿಕೆಟ್ ಬೀಳುವುದಿಲ್ಲ ಎಂದು ಅವರು ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬೌಲರ್‌ಗಳು ಹೇಗಿದ್ದಾರೆ ಎಂಬುದು ರಾಜ್ಯದ ಜನತೆಗೆ ಗೊತ್ತಿದೆ. ಅವರು ಹಾಕುವ ನೋಬಾಲ್ ಹಾಗೂ ಫುಲ್‌ಟಾಸ್‌ಗೆ ವಿಕೆಟ್ ಬೀಳುವುದಿಲ್ಲ. ಅಂಪೈರ್ ಯಾರೇ ಇದ್ದರೂ ಅಂತಿಮವಾಗಿ ವಿಕೆಟ್ ಬೀಳುವುದು ಬಿಜೆಪಿ–ಜೆಡಿಎಸ್ ನಾಯಕರದ್ದೇ ಎಂದು ಟೀಕಿಸಿದರು.

ಕೆಪಿಎಸ್‌ಸಿ ಪ್ರಕರಣದ ಕುರಿತು ಮಾತನಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಪ್ರಕರಣದ ಸಂಪೂರ್ಣ ಮಾಹಿತಿ ಇಲ್ಲ ಎಂದು ಆರೋಪಿಸಿದ ಅವರು, ಪ್ರಕರಣದಲ್ಲಿ ಮಧ್ಯವರ್ತಿಯೊಬ್ಬ ಸಿಕ್ಕಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಪಾತ್ರದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಈ ಕುರಿತು ಬಿಜೆಪಿ ನಾಯಕರು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

‘ದಾಖಲೆಗಳಿದ್ದರೆ ಬಹಿರಂಗಪಡಿಸಿ’

ತಾವು ಯಾವುದೇ ತಪ್ಪು ಮಾಡಿದ್ದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿಧಾನಮಂಡಲದ ಸದನದಲ್ಲಿ ಈ ವಿಚಾರವನ್ನು ಚರ್ಚಿಸಲಿ ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.

ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರ ಬಗ್ಗೆ ಬಿಜೆಪಿ–ಜೆಡಿಎಸ್ ನಾಯಕರು ಏಕೆ ಮಾತನಾಡುತ್ತಿಲ್ಲ? ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು ಯಾರು ಎಂಬುದನ್ನು ಅವರು ನೆನಪಿಸಿಕೊಳ್ಳಬೇಕು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೆಪಿಎಸ್‌ಸಿ ವಿಚಾರದಲ್ಲಿ ಶಿವಶಂಕರಪ್ಪ ಅವರ ಬಗ್ಗೆ ಮಾತನಾಡಬೇಕು. ತಮ್ಮ ವಿರುದ್ಧ ಆರೋಪ ಮಾಡುವ ಬದಲು ಪ್ರಕರಣದ ಮೂಲ ವಿಚಾರಗಳ ಕುರಿತು ಚರ್ಚಿಸಲಿ ಎಂದು ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.

ಬಿಜೆಪಿ ನಾಯಕರಾದ ಆರ್. ಅಶೋಕ, ಬಿ.ವೈ. ವಿಜಯೇಂದ್ರ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರ ಬಳಿ ತಮ್ಮ ವಿರುದ್ಧ ಕೆಪಿಎಸ್‌ಸಿಗೆ ಸಂಬಂಧಿಸಿದ ಯಾವುದೇ ದಾಖಲೆ ಅಥವಾ ಮಾಹಿತಿ ಇದ್ದರೆ ಅದನ್ನು ಬಹಿರಂಗಪಡಿಸಲಿ. ಎಲ್ಲ ಆರೋಪಗಳಿಗೂ ಉತ್ತರಿಸಲು ತಾವು ಸಿದ್ಧ ಎಂದು ಸವಾಲು ಹಾಕಿದರು.

ಪೊಲೀಸ್ ಇಲಾಖೆಯ ಸುಧಾರಣೆಗೆ ಕ್ರಮ

ರಾಜ್ಯದಲ್ಲಿ ಸುಮಾರು ಒಂದು ಲಕ್ಷ ಪೊಲೀಸ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ನೂರಾರು ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಕೆಲವೇ ಮಂದಿಯಿಂದ ನಡೆಯುವ ತಪ್ಪು ಘಟನೆಗಳು ಹೆಚ್ಚು ಪ್ರಚಾರ ಪಡೆಯುತ್ತವೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಾನೂನು ಉಲ್ಲಂಘನೆಯ ಆರೋಪದ ಮೇಲೆ ಪ್ರಕರಣ ದಾಖಲಿಸುವುದು ಒಂದು ವಿಚಾರ. ಆದರೆ ಅನ್ಯಾಯದ ವಿರುದ್ಧ ಧ್ವನಿ ಎತ್ತುವವರ ಮೇಲೆಯೇ ಎಫ್‌ಐಆರ್ ದಾಖಲಿಸುವುದು ಸರಿಯೇ ಎಂದು ಪ್ರಶ್ನಿಸಿದರು.

ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಮಾತನಾಡುವವರ ವಿರುದ್ಧ ಪ್ರಕರಣ ದಾಖಲಿಸುವಂತಹ ಪರಿಸ್ಥಿತಿ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದರು.

ಝೀರೋ ಟ್ರಾಫಿಕ್ ಸೌಲಭ್ಯವನ್ನು ತಾವು ಕೇಳಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ ಪ್ರಿಯಾಂಕ್ ಖರ್ಗೆ, ಈ ವಿಚಾರದಲ್ಲಿ ಮಾಜಿ ಸಚಿವ ಬಿ.ಸಿ. ಪಾಟೀಲರಿಗೆ ಏನು ತೊಂದರೆಯಾಗಿದೆ ಎಂಬುದು ಗೊತ್ತಿಲ್ಲ ಎಂದರು. ಅವರು ಗೃಹ ಸಚಿವರಾಗಿದ್ದಾಗ ಜನಸಂದಣಿಯಲ್ಲೇ ಸಂಚರಿಸುತ್ತಿದ್ದರೇ? ಯಾವುದೇ ಆಧಾರವಿಲ್ಲದೆ ವಿಚಾರಗಳನ್ನು ಪ್ರಸ್ತಾಪಿಸುವುದರಿಂದ ಪ್ರಯೋಜನವಿಲ್ಲ ಎಂದು ತಿರುಗೇಟು ನೀಡಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಎಸ್‌ಟಿ ಸಂಗ್ರಹ ಶೇ. 14.8ರಷ್ಟು ಏರಿಕೆ: ಆಗಸ್ಟನಲ್ಲಿ ₹2 ಲಕ್ಷ ಕೋಟಿ ವರಮಾನಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ: ಪ್ರಿಯಾಂಕ್ ಖರ್ಗೆಡಿಸಿಪಿ ನೇಮಗೌಡ ಮೇಲೆ ಹಲ್ಲೆ ಆರೋಪ: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ವಿರುದ್ಧ ಜೆಡಿಎಸ್ ವಾಗ್ದಾಳಿಜಿಡಿಪಿ ಅಂಕಿಅಂಶ ತಿರುಚಿ ಆರ್ಥಿಕ ದುಸ್ಥಿತಿ ಮರೆಮಾಚಲಾಗುತ್ತಿದೆ: ಕಾಂಗ್ರೆಸ್‘2028ರಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ’: ಬಿ.ವೈ. ವಿಜಯೇಂದ್ರ‘ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು: ನೂರ್ ಶ್ರೀಧರ ಆಗ್ರಹ‘ಎಸ್‌ಐಆರ್ ದೇಶವನ್ನು ಹಾಳು ಮಾಡುವ ಸಂಚು’: ನಟ ಪ್ರಕಾಶ ರಾಜ್ದೇಶಾದ್ಯಂತ ನೀಟ್ ಪ್ರತಿಭಟನಾಕಾರರ ವಿರುದ್ಧದ ಎಲ್ಲ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟದೇಶಾದ್ಯಂತ ಟೀಕೆಗೆ ಗುರಿಯಾದ ಝೀ ಗ್ರೂಪ್ ಮುಖ್ಯಸ್ಥನ ₹22,000 ಕೋಟಿ ಸಾಲ ಮನ್ನಾ ಆದೇಶಕ್ಕೆ ತಡೆಇರಾನ್ ಸಂಘರ್ಷದ ನಡುವೆಯೂ ಭಾರತದ ಜಿಡಿಪಿ ಶೇ 7.8ರ ಬೆಳವಣಿಗೆ: ಪ್ರಧಾನಿ ಮೋದಿ