ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೇಶ ಒಡೆಯುತ್ತಿರುವ ಬಿಜೆಪಿ, ಆರ್‌ಎಸ್‌ಎಸ್‌ : ರಾಹುಲ್ ಗಾಂಧಿ 

ಬಳ್ಳಾರಿ : ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಿದ್ಧಾಂತವು ದೇಶವನ್ನು ಒಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ನಡೆದ ಭಾರತ ಜೋಡೋ ಮೆಗಾ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ, ಆರ್‌ಎಸ್‌ಎಸ್‌ನ ಸಿದ್ಧಾಂತವು ದೇಶವನ್ನು ಮುರಿಯುತ್ತಿದೆ. ಹಾಗಾಗಿ ನಾವು ಈ ಯಾತ್ರೆಯನ್ನು ಭಾರತ ಜೋಡೋ ಯಾತ್ರೆ ಎಂದು ಹೆಸರಿಸಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದರು.

ಕನ್ಯಾಕುಮಾರಿಯಿಂದ ಸೆಪ್ಟೆಂಬರ 7 ರಂದು ಪ್ರಾರಂಭವಾದ 3,570 ಕಿ.ಮೀ ಭಾರತ ಜೊಡೊ ಯಾತ್ರೆ 38ನೇ ದಿನವನ್ನು ಪ್ರವೇಶಿಸಿದೆ. ಇಂದು ಭಾರತವು 45 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿದೆ. ಪ್ರತಿವರ್ಷ 2 ಕೋಟಿ ಯುವಕರಿಗೆ ಉದ್ಯೋಗವನ್ನು ಒದಗಿಸುವುದಾಗಿ ಪ್ರಧಾನಿ ಹೇಳಿದ್ದರು. ಆ ಉದ್ಯೋಗಗಳು ಎಲ್ಲಿಗೆ ಹೋದವು. ಬದಲಾಗಿ, ಯುವಕರು ನಿರುದ್ಯೋಗಿಗಳಾಗಿದ್ದಾರೆ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ನೀವು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಆಗಲು ಬಯಸಿದರೆ ನೀವು 80 ಲಕ್ಷ ರೂ. ಕೊಡಬೇಕು. ನಿಮ್ಮ ಜೀವನದುದ್ದಕ್ಕೂ ನೀವು ನಿರುದ್ಯೋಗಿಯಾಗಿ ಉಳಿಯಬಹುದು ಎಂದು ರಾಹುಲ್ ಗಾಂಧಿ ಹೇಳಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.