ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಕ್ಷಣಾ ಇಲಾಖೆ ವಶದಲ್ಲಿರುವ ಭೂಮಿ ಹಸ್ತಾಂತರಿಸುವಂತೆ ಬೊಮ್ಮಾಯಿ ಮನವಿ

ಬೆಂಗಳೂರು: ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ 732.24 ಎಕರೆ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ವೇಳೆ ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿಯಲ್ಲಿರುವ  732.24 ಎಕರೆ ಪ್ರದೇಶವು ರಕ್ಷಣಾ ಪ್ರಾಧಿಕಾರದ ವಶದಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ದೃಷ್ಟಿಯಿಂದ ಈ ಭೂಮಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗೆ ಹಸ್ತಾಂತರಿಸಲು ರಕ್ಷಣಾ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಸಲ್ಲಿಸಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.