LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗಡಿ ವಿವಾದ : ಸೋಮವಾರ ಮಹಾರಾಷ್ಟ್ರದ ಉನ್ನತಾಧಿಕಾರ ಸಮಿತಿ ಸಭೆ 

ಬೆಳಗಾವಿ : ಅಂತರ್ರಾಜ್ಯಗಳ ಗಡಿ ವಿವಾದಗಳನ್ನು ಇತ್ಯರ್ಥ ಪಡಿಸುವ ಅಧಿಕಾರ ತಮ್ಮಗೆ ಇದೆಯೋ ಇಲ್ಲವೋ ಎಂಬ ವಿಷಯದ ಕುರಿತು ನವೆಂಬರ್ 23 ರಂದು ನಿರ್ಧಾರ ಪ್ರಕಟಿಸುವದಾಗಿ ಸರ್ವೋಚ್ಚ ನ್ಯಾಯಾಲಯ ತಿಳಿಸಿರುವ ಹಿನ್ನಲೆಯಲ್ಲಿ ಮಹಾರಾಷ್ಟ್ರ ಸ್ಥಾಪಿಸಿರುವ ಉನ್ನತಾಧಿಕಾರ ಸಮಿತಿ ಸಭೆ ನವೆಂಬರ 21 ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಜರುಗಲಿದೆ.



ಮುಖ್ಯಮಂತ್ರಿ ಏಕನಾಥ ಶಿಂದೆ ಅಧ್ಯಕ್ಷರಾಗಿರುವ ಸಮಿತಿಗೆ ಮಹಾರಾಷ್ಟ್ರದ ಎಲ್ಲ ಪಕ್ಷಗಳ ಮುಖ್ಯಸ್ಥರು ಸದಸ್ಯರಾಗಿದ್ದು ಸಭೆಗೆ ಹಾಜರಾಗಲ್ಲಿದ್ದಾರೆ.



ಕೇಂದ್ರ ಸಚಿವ ನಾರಾಯಣ ರಾಣೆ, ಶರದ ಪವಾರ, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ ಮತ್ತು ಪೃಥ್ವಿರಾಜ ಚವಾಣ, ಮಹಾರಾಷ್ಟ್ರ ಸರಕಾರದ ಸಚಿವರು, ವಿಧಾನಸಭೆ ವಿರೋಧಿ ಪಕ್ಷದ ನಾಯಕ ಅಜಿತ ಪವಾರ, ವಿಧಾನ ಪರಿಷತ್ ವಿರೋಧಿ ಪಕ್ಷದ ಮುಖ್ಯಸ್ಥ ಅಂಬಾದಾಸ ದಾವೆ ಭಾಗವಹಿಸಲಿದ್ದಾರೆ.



1956ರಲ್ಲಿ ರಾಜ್ಯಗಳು ಪುನರ್ ರಚನೆ ಸಂದರ್ಭದಲ್ಲಿ ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ, ಭಾಲ್ಕಿ ಸೇರಿದಂತೆ 854 ಪಟ್ಟಣ, ಗ್ರಾಮಗಳನ್ನು ಅನ್ಯಾಯವಾಗಿ ಕರ್ನಾಟಕಕ್ಕೆ ಸೇರಿಸಲಾಗಿದೆ, ಅವುಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ಮಹಾರಾಷ್ಟ್ರ ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿಯನ್ನು ನವೆಂಬರ 23, 2014 ರಂದು ಮನವಿ ಮಾಡಿಕೊಂಡಿದೆ. ವಿಪರ್ಯಾಸವೆಂದರೆ ಎಂಟು ವರ್ಷಗಳ ಬಳಿಕ ಅಂದರೇ ನವೆಂಬರ್ 23, 2022 ರಂದು ನ್ಯಾಯಾಲಯ ಪ್ರಕರಣ ತೆಗೆದುಕೊಳ್ಳುತ್ತಿದೆ.



ಇನ್ನು ಈ ಬಗ್ಗೆ ಕರ್ನಾಟಕ, ಸಂವಿಧಾನದ 3 ನೇ ವಿಧಿಯಂತೆ - ಅಂತರ ರಾಜ್ಯಗಳ ಗಡಿ ವ್ಯಾಜ್ಯ ನಿರ್ಧಾರ ತೀರ್ಮಾನ ಸರ್ವೋಚ್ಚ ನ್ಯಾಯಾಲಯದ ವ್ಯಾಪ್ತಿಗೆ ಬರಲ್ಲ, ಸಂಸತ್ತ ಮಾತ್ರ ಇದನ್ನು ನಿರ್ಧರಿಸಬಲ್ಲದು ಎಂದು ವಾಧಿಸಿದೆ. ಆದರೆ ಮಹಾರಾಷ್ಟ್ರ ಸಂವಿಧಾನದ 131ನೇ ವಿಧಿಯನ್ವಯ ಸರ್ವೋಚ್ಚ ನ್ಯಾಯಾಲಯಕ್ಕೆ ಅಧಿಕಾರವಿದೆ ಎಂದು ವಾದಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ