ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಮುದ ಗವಾನ್ ಮದರಸಾಕ್ಕೆ ನುಗ್ಗಿ ದುರ್ಗಾ ಪೂಜೆ; ೯ ಜನರ ವಿರುದ್ಧ ಪ್ರಕರಣ

ಬೀದರ‌ : ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ  ಗುಂಪೊಂದು ೧೪೬೦ರಲ್ಲಿ ನಿರ್ಮಿಸಲಾಗಿರುವ ಪಾರಂಪರಿಕ ಮದರಸಾವೊಂದಕ್ಕೆ ನುಗ್ಗಿ ದುರ್ಗಾ ಪೂಜೆ ಮಾಡಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಈ ಸಂಬಂಧ ಒಂಭತ್ತು ಜನರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಮಾತ್ರ ಬಂಧಿಸಲಾಗಿದೆ. ಬೀದರ‌ನ ಹಲವಾರು ಮುಸ್ಲಿಂ ಸಂಘಟನೆಗಳು ಘಟನೆಯನ್ನು ಖಂಡಿಸಿವೆ. ಎಲ್ಲರನ್ನೂ ಬಂಧಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಮುಸ್ಲಿಂ ಸಂಘಟನೆಗಳು ಬೆದರಿಕೆ ಹಾಕಿವೆ.

https://twitter.com/asadowaisi/status/1578040642386567174?t=w3VLJX2c2S7c4svMTCZl0A&s=19

1460 ರ ದಶಕದಲ್ಲಿ ನಿರ್ಮಿಸಲಾದ ಬೀದರ‌ನಲ್ಲಿರುವ ಮಹಮುದ ಗವಾನ್ ಮದರಸಾ ಭಾರತೀಯ ಪುರಾತತ್ವ ಸಮೀಕ್ಷೆಯ ಅಡಿಯಲ್ಲಿ ಗೊತ್ತುಪಡಿಸಿದ ಪಾರಂಪರಿಕ ತಾಣವಾಗಿದೆ. ಈ ರಚನೆಯನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕಗಳಲ್ಲಿ ಪಟ್ಟಿ ಮಾಡಲಾಗಿದೆ.

ಪೂಜೆ ಮಾಡಲು ಒಳಗೆ ಈ ಗುಂಪು ಮದರಸಾದ ಬೀಗ ಒಡೆದು ಒಳಗೆ ನುಗ್ಗಿದೆ. ಇದಕ್ಕೂ ಮುನ್ನ ಮದರಸಾದ ಮೆಟ್ಟಿಲುಗಳ ಮೇಲೆ ನಿಂತು ಅವರು "ಹಿಂದೂ ಧರ್ಮ ಕೀ ಜೈ" ಘೋಷಣೆಗಳನ್ನು ಕೂಗಿದ್ದಾರೆ. ಇದರ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗುತ್ತಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.