ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೀರು ಕುಡಿದ ವಿಚಾರಕ್ಕೆ ಎರಡು ಸಮುದಾಯಗಳ ಮಧ್ಯೆ ಗಲಾಟೆ : 15 ಜನರಿಗೆ ಗಾಯ 

ಗದಗ : ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿಯಲ್ಲಿ ನೀರು ಕುಡಿದ ವಿಚಾರಕ್ಕೆ ಎರಡು ಸಮುದಾಯಗಳ ಮಧ್ಯೆ ಗಲಾಟೆ ನಡೆದಿದ್ದು, ಈ ಗಲಾಟೆ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ನಡೆದಂತಹ ಘಟನೆ ನಡೆದಿದೆ.

ಎಸ್‌ಸಿ ಹಾಗೂ ಎಸ್‌ಟಿ ಸಮುದಾಯದ ಮಧ್ಯೆ ಈ ಗಲಾಟೆ ನಡೆದಿದ್ದು, ವಾಲ್ಮೀಕಿ ಸಮುದಾಯದ ರೈತನ ಜಮೀನಲ್ಲಿ ಯುವಕನೋರ್ವ ನೀರು ಕುಡಿದಿದ್ದಾನೆ. ಆತ ಮಾದಿಗ ಸಮುದಾಯಕ್ಕೆ ಸೇರಿದ ವ್ಯಕ್ತಿ ಎಂದು ವಾಲ್ಮೀಕಿ ಸಮುದಾಯದ ರೈತ ಆಕ್ಷೇಪ ವ್ಯಕ್ತಪಡಿಸಿದ್ದು, ಇದೇ ವಿಚಾರ ಊರೆಲ್ಲಾ ಹಬ್ಬಿ ಈ ಎರಡು ಸಮುದಾಯಗಳ ನಡುವೆ ದೊಡ್ಡ ಗಲಾಟೆ ನಡೆದಿದೆ.

ಪರಸ್ಪರ ಹೊಡೆದಾಡಿಕೊಂಡ ಎರಡು ಗುಂಪುಗಳ ಜನ ಕಲ್ಲು ತೂರಾಟವನ್ನು ನಡೆಸಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಘಟನೆಯಲ್ಲಿ ಎರಡೂ ಗುಂಪಿನ 15 ಜನರಿಗೆ ಗಾಯಗಳಾಗಿದ್ದು, ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ‌ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ರೋಹನ್ ಜಗದೀಶ ಅವರು ಭೇಟಿ ನೀಡಿದ್ದು, ಸ್ಥಳದಲ್ಲಿ ಮಾಹಿತಿ ಪೊಲೀಸರನ್ನು ನಿಯೋಜಿಸಲಾಗಿದೆ.

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.