ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚಿರತೆ ದಾಳಿಗೆ ಕಾಲೇಜ ವಿದ್ಯಾರ್ಥಿ ಸಾವು

ಮೈಸೂರು: ಚಿರತೆ ದಾಳಿಗೆ ಕಾಲೇಜು ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಮಲ್ಲಿಕಾರ್ಜುನ ಬೆಟ್ಟದಲ್ಲಿ ನಡೆದಿದೆ.

ಮಂಜುನಾಥ (20) ಮೃತ ವಿದ್ಯಾರ್ಥಿ. ಎಂ.ಎಲ್. ಹುಂಡಿ ಗ್ರಾಮದ ಮಂಜುನಾಥ್ ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ. ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಟಿ. ನರಸೀಪುರ ತಾಲೂಕಿನ ಉಕ್ಕಲಗೆರೆ ಗ್ರಾಮದ ಮಲ್ಲಿಕಾರ್ಜುನಸ್ವಾಮಿ ಬೆಟ್ಟಕ್ಕೆ ತೆರಳಿದ್ದ.

ಬೆಟ್ಟಕ್ಕೆ ತೆರಳಿದ್ದ ವೇಳೆ ಯುವಕ ಮಂಜುನಾಥ್ ಮೇಲೆ ಚಿರತೆ ದಾಳಿ ನಡೆಸಿದೆ. ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.