ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಜಯಪುರದಲ್ಲಿಯೂ ಮತದಾರ ಪಟ್ಟಿಯಿಂದ ಹೆಸರು ಅಳಿಸುವ ಕೆಲಸ; ಕಾಂಗ್ರೆಸ್ ಆರೋಪ

ವಿಜಯಪುರ: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಮತದಾರರ ಮಾಹಿತಿ ಅಕ್ರಮ ಪ್ರಕರಣವು ವಿಜಯಪುರಕ್ಕೂ ಹಬ್ಬಿದೆ ಎಂದು ಆರೋಪಿಸಲಾಗಿದೆ.

ನಗರದ ಶಾಸಕರು ತಮ್ಮ ಖಾಸಗಿ ಬ್ಯಾಂಕ್ ಸಿಬ್ಬಂದಿಯಿಂದ ಕೆಲವು ವೋಟರ್ ಐಟಿಯ ದತ್ತಾಂಶ ಸಂಗ್ರಹಿಸಿ ಹೆಸರು ತೆಗೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರಿಪ್ ಗಂಭೀರ ಆರೋಪ ಮಾಡಿದ್ದಾರೆ.

ಶಾಸಕರ ಕಡೆಯವರು ಮನೆ ಮನೆಗೆ ಹೋಗಿ ಸಮೀಕ್ಷೆ ಮಾಡಿ, ಯಾರು ಕಾಂಗ್ರೆಸ್​ಗೆ ವೋಟ್​ ಮಾಡುತ್ತೇವೆ ಎಂದು ಹೇಳುತ್ತಾರೋ ಅಂತಹವರ ವೋಟರ್​ ಐಡಿ ಪಟ್ಟಿಯಿಂದ ತೆಗೆದು ಹಾಕಲಾಗಿದೆ.

ಈ ರೀತಿ ಮನೆ ಮನೆ ಹೋಗುವವರನ್ನು ಹಿಡಿಯಲು ಹೋದಾಗ ಇಬ್ಬರು ಓಡಿ ಹೋಗಿದ್ದು, ಓರ್ವ ಸಿಕ್ಕಿ ಹಾಕಿಕೊಂಡಿದ್ದನು. ನಂತರ ನಗರ ಶಾಸಕ ಪಿಎ ಫೋನ್ ಮಾಡಿ ಅವರನ್ನು ಬಿಡಿ ಎಂದು ಮನವಿ ಮಾಡಿ ಬಿಡಿಸಿಕೊಂಡು ಹೋಗಿದ್ದಾರೆ. ಅವರ ಬಳಿ ಇದ್ದ ವೋಟರ್ ಐಡಿಗಳನ್ನು ತಹಸೀಲ್ದಾರ್​ಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದ್ದಾರೆ.

ಈ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಜಿಲ್ಲಾಧಿಕಾರಿ, ತಹಸೀಲ್ದಾರ ಹಾಗೂ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.