LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನೀಟ್ ಅಕ್ರಮ, ನಿರುದ್ಯೋಗ ವಿರುದ್ಧ ಕಾಂಗ್ರೆಸ್ ರಣಕಹಳೆ: ರಾಹುಲ್ ನೇತೃತ್ವದಲ್ಲಿ ವಿದ್ಯಾರ್ಥಿ ಸಮಾವೇಶ

ಹೊಸದಿಲ್ಲಿ, ಜೂನ್ 13 : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ನಿರುದ್ಯೋಗದ ವಿರುದ್ಧ ಕಾಂಗ್ರೆಸ್ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಲು ತೀರ್ಮಾನಿಸಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮುಂದಿನ ಒಂದು ತಿಂಗಳ ಅವಧಿಯಲ್ಲಿ ನಾಲ್ಕು ವಿದ್ಯಾರ್ಥಿ ಸಮಾವೇಶಗಳನ್ನು ಆಯೋಜಿಸಲಿದೆ.

ಮೊದಲ ವಿದ್ಯಾರ್ಥಿ ಸಮಾವೇಶವು ಜೂನ್ 17ರಂದು ದೇಶದ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರಗಳ ಪ್ರಮುಖ ತಾಣವಾದ ರಾಜಸ್ಥಾನದ ಕೋಟಾದಲ್ಲಿ ನಡೆಯಲಿದೆ. ಜೂನ್ 11ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಭಿಯಾನದ ಮೂಲಕ ನೀಟ್ ಪರೀಕ್ಷೆಯ ವಿಕೇಂದ್ರೀಕರಣ, ಪರೀಕ್ಷಾ ಶುಲ್ಕ ರದ್ದು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ಕಾಂಗ್ರೆಸ್ ಮುಂದಾಗಿದೆ.

ಈ ಕುರಿತು ಮಾಹಿತಿ ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು, ನಿರುದ್ಯೋಗ ಹಾಗೂ ಮೋದಿ ಸರ್ಕಾರದಿಂದ ಯುವಕರಿಗೆ ಆಗುತ್ತಿರುವ ವ್ಯವಸ್ಥಿತ ದ್ರೋಹದ ವಿರುದ್ಧ ಈ ಅಭಿಯಾನ ಕೇಂದ್ರೀಕೃತವಾಗಲಿದೆ ಎಂದು ಹೇಳಿದರು.

ಪ್ರಶ್ನೆಪತ್ರಿಕೆ ಸೋರಿಕೆ, ಹೆಚ್ಚುತ್ತಿರುವ ಪರೀಕ್ಷಾ ವೆಚ್ಚ ಹಾಗೂ ಪಾರದರ್ಶಕ ನೇಮಕಾತಿ ಮತ್ತು ಶಿಕ್ಷಣ ವ್ಯವಸ್ಥೆ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಅಭಿಯಾನ ಮಾಡಲಿದೆ ಎಂದು ಅವರು ತಿಳಿಸಿದರು. ಅಭಿಯಾನದ ಭಾಗವಾಗಿ ಎನ್‌ಎಸ್‌ಯುಐ, ಯುವ ಕಾಂಗ್ರೆಸ್ ಹಾಗೂ ರಾಜ್ಯ, ಜಿಲ್ಲಾ ಮತ್ತು ಸ್ಥಳೀಯ ಘಟಕಗಳ ಮೂಲಕ ವಿದ್ಯಾರ್ಥಿಗಳನ್ನು ಸಂಘಟಿಸಲು ರಾಹುಲ್ ಗಾಂಧಿ ಕರೆ ನೀಡಿದ್ದಾರೆ ಎಂದು ಹೇಳಿದರು.

ಜುಲೈ 10ರಂದು ಅಲಹಾಬಾದ, ಜುಲೈ 11ರಂದು ಪಾಟ್ನಾ ಹಾಗೂ ಜುಲೈ 14ರಂದು ಹೊಸದಿಲ್ಲಿಯಲ್ಲಿ ವಿದ್ಯಾರ್ಥಿ ಸಮಾವೇಶಗಳು ನಡೆಯಲಿವೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಅವಧಿ ವಿಸ್ತರಣೆಲಾರಿ ಡಿಕ್ಕಿಗೆ ಬೈಕ್ ಸವಾರನ ಸಾವು : ಅವೈಜ್ಞಾನಿಕ ವಿನ್ಯಾಸ ವಿರೋಧಿಸಿ ಪ್ರತಿಭಟನೆಮಹಿಳಾ ಸಂಘದ ಹೆಸರಲ್ಲಿ ₹43.40 ಲಕ್ಷ ವಂಚನೆ: ಇಬ್ಬರು ಮಹಿಳೆಯರ ಬಂಧನಕಡಲೆಕಾಯಿ ಗಂಟಲಲ್ಲಿ ಸಿಲುಕಿ 3 ವರ್ಷದ ಬಾಲಕನ ಸಾವುಡಿಟರ್ಜೆಂಟ್ ಸೇರಿಸಿ ಕೃತಕ ರಾಸಾಯನಿಕಯುಕ್ತ ಹಾಲು ತಯಾರಿಸುವ ರಾಕ್ಷಸರ ಜಾಲ ಪತ್ತೆ!10ನೇ ತರಗತಿಗೆ ಮೂರನೇ ಭಾಷೆ ಕಡ್ಡಾಯ; 2027–28ರಿಂದ ಸಿಬಿಎಸ್‌ಇ ಹೊಸ ನಿಯಮಬಿಜೆಪಿ ಸ್ವಾರ್ಥಕ್ಕೆ ಬಡವರ ಮಕ್ಕಳು ಬಲಿ: ಖರ್ಗೆಗೋಕಾಕ ಜಲಪಾತ ಸೇರಿ ರಾಜ್ಯದ 13 ಕಡೆ ರೋಪ್‌ ವೇ ಯೋಜನೆಗೆ ವೇಗರೋಟರಾಕ್ಟ್ ಕ್ಲಬ್ ಆಫ್ ಬೆಲಗಾಮ್ ಸೌಥಗೆ ನೂತನ ಪದಾಧಿಕಾರಿಗಳ ಪದಗ್ರಹಣ; ಅಧ್ಯಕ್ಷೆಯಾಗಿ ಮೋನಿಕಾ ಶಿಂಧೆ ಅಧಿಕಾರ ಸ್ವೀಕಾರಎಸ್‌ ಜಾನಕಿ ನಿಧನಕ್ಕೆ ಗಣ್ಯರ ಕಂಬನಿ