ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಸತಿ ಉದ್ದೇಶಕ್ಕಾಗಿ ಕೃಷಿ ಜಮೀನು ಭೂ ಪರಿವರ್ತನೆ ಮಾಡಲು ಕೋರ್ಟ ಅನುಮತಿ

ಬೆಂಗಳೂರು: ಕೃಷಿ ಜಮೀನು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯೊಳಗಿದ್ದರೆ ನಿಗದಿತ ಶುಲ್ಕ ಪಡೆದು ಆ ಭೂಮಿಯನ್ನು ವಸತಿ ಉದ್ದೇಶಕ್ಕೆ ಬಳಕೆ ಮಾಡಲು ಭೂ ಪರಿವರ್ತನೆಗೆ ಅನುಮತಿ ನೀಡಬೇಕಾಗುತ್ತದೆ ಎಂದು ಹೈಕೋರ್ಟ ಆದೇಶ ನೀಡಿದೆ.

ಧಾರವಾಡದ ಶಬರಿ ನಗರದ ಜುನೈದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ ನ್ಯಾಯಮೂರ್ತಿ ಹೇಮಂತ ಚಂದನ ಗೌಡರ್ ಅವರಿದ್ದ ಏಕ ಸದಸ್ಯ ಪೀಠದಿಂದ ಈ ಆದೇಶ ನೀಡಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 95ರ ಪ್ರಕಾರ ಕೃಷಿ ಜಮೀನು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿದ್ದರೆ ಅಂತಹ ಜಮೀನನ್ನು ಯಾವ ಉದ್ದೇಶಕ್ಕೆ ಗೊತ್ತುಪಡಿಸಲಾಗಿದೆಯೋ ಅದಕ್ಕಾಗಿ ಪರಿವರ್ತಿಸಲು ಕೋರಿದರೆ ದಂಡ ಪಾವತಿಯ ಷರತ್ತಿಗೆ ಒಳಪಟ್ಟು ಅನುಮತಿ ನೀಡಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯೊಳಗೆ ಇರುವ ಕೃಷಿ ಜಮೀನನ್ನು ನಿಗದಿತ ಶುಲ್ಕ ಪಡೆದು ವಸತಿ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆಗೆ ಅನುಮತಿ ನೀಡಬೇಕಾಗುತ್ತದೆ ಎಂದು ಹೈಕೋರ್ಟ ಹೇಳಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.