LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸಿದ್ದರಾಮಯ್ಯಗೆ ಪ್ರಿಯವಾದುದನ್ನೇ ಹೇಳಿದ್ದೇನೆ; ಸಿ.ಟಿ.ರವಿ ಸಮರ್ಥನೆ

ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ ಎಂದು ಕರೆದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಸದ್ಭಾವನೆಯಿಂದ ಬರುವುದಾದರೆ ಬರಲಿ ಎಂದು ಹೇಳಿದ್ದಾರೆ.



ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ ಕಾರ್ಯಕರ್ತರು ಸದ್ಭಾವನೆಯಿಂದ ಬಂದರೆ ಅತಿಥಿಗಳು ಎಂದು ನಾವು ಭಾವಿಸುತ್ತೇವೆ. ಅತಿಥಿಗಳನ್ನು ದೇವರು ಎಂದು ಆದರಿಸುತ್ತೇವೆ. ಆದರೆ ದರ್ಪದಿಂದ ಬಂದರೆ ಅದೇ ಭಾವನೆಯಿಂದಲೇ ಪ್ರತಿಕ್ರಿಯಿಸುತ್ತೇವೆ ಎಂದಿದ್ದಾರೆ.



ಸಿದ್ರಾಮುಲ್ಲಾಖಾನ ಎಂದು ಸಿದ್ದರಾಮಯ್ಯನವರಿಗೆ ನಾನಷ್ಟೇ ಹೇಳಿಲ್ಲ. ಈ ಹಿಂದೆ ಕೆ.ಎಸ್.ಈಶ್ವರಪ್ಪ ಕೂಡ ಹೇಳಿದ್ದರು. ಇಷ್ಟಕ್ಕೂ ಸಿದ್ದರಾಮಯ್ಯನವರಿಗೆ ಪ್ರಿಯವಾದುದನ್ನೇ ಹೇಳಿದ್ದೇನೆ. ಅವರಿಗೆ ಟಿಪ್ಪು ಸುಲ್ತಾನ, ಟಿಪ್ಪು ಟೋಪಿ ಪ್ರಿಯವಾದುದಲ್ಲವೇ? ಅದಕ್ಕೆ ಹಾಗೆ ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ