LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಸಿ ಟಿ ರವಿ ಪ್ರಕರಣ ಬೆಂಗಳೂರಿಗೆ ವರ್ಗಾವಣೆ

ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳಕರ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ನ್ಯಾಯಾಲಯ ಇಂದು ಮಹತ್ವದ ಆದೇಶ ಪ್ರಕಟಿಸಿದ್ದು ಅವರನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿಯ ಐದನೇ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸ್ಪರ್ಶ ಡಿಸೋಜ ಅವರು ಆದೇಶಿಸಿದ್ದಾರೆ.



ರವಿ ಅವರನ್ನು ಟ್ರಾಜೆಂಟ್ ವಾರೆಂಟ್ ಆದೇಶದಂತೆ ಪೊಲೀಸರು ಬೆಂಗಳೂರಿಗೆ ಕರೆದೊಯ್ಯಲಿದ್ದಾರೆ. ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗ್ಗೆ ಬೆಳಗಾವಿ ನ್ಯಾಯಾಲಯಕ್ಕೆ ರವಿ ಅವರನ್ನು ಹಾಜರುಪಡಿಸಿದ್ದರು.



ಅವರ ವಕೀಲರು ಜಾಮೀನು ನೀಡುವಂತೆ ಮನವಿ ಮಾಡಿದ್ದರು. ವಾದ- ಪ್ರತಿವಾದ ಆಲಿಸಿರುವ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಆದರೆ ತನಿಖಾಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕರೆದೊಯ್ಯಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಬೆಳಗಾವಿ ನ್ಯಾಯಾಲಯ ಬೆಂಗಳೂರಿಗೆ ಕರೆದೊಯ್ಯಲು ಎಷ್ಟು ಸಮಯ ಬೇಕು ಎಂದು ಕೇಳಿದೆ. ಇದಕ್ಕೆ ಪೊಲೀಸರು ವಿಮಾನದ ಮೂಲಕ ಹೋಗುವುದಾದರೆ ಎರಡು ಗಂಟೆ, ರಸ್ತೆ ಮೂಲಕ ಹೋಗುವುದಾದರೆ 12 ಗಂಟೆ ಬೇಕು ಎಂದು ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ