ಡ್ಯಾಮ್ ಗಳನ್ನು ಎತ್ತರ ಮಾಡಲು ಡ್ಯಾಮ್ ಅವರ ತಾತನ ಮನೆಯದ್ದಲ್ಲ, ನ್ಯಾಯಯುತವಾಗಿ ನೀರು ಹಂಚಿಕೆ ಮಾಡಬೇಕಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಧಾನಸಭೆಯಲ್ಲಿ ಹೇಳಿದರು.
ನಮಗೆ ಸಿಗಬೇಕಾದ ನೀರು ನ್ಯಾಯಯುತವಾಗಿ ಸಿಗುತ್ತದೆ. ನೀರು ಹಂಚಿಕೆ ಬಂದ್ ಮಾಡಲು ಯಾರಿಗೂ ಅಧಿಕಾರವಿಲ್ಲ. ಮಹಾರಾಷ್ಟ್ರ ಸರ್ಕಾರ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ಸರಿಯಲ್ಲ ಎಂದರು.








