ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಾಲೂಕು ಕಚೇರಿಗಳಲ್ಲಿ ಡಿಸಿ, ಎಸ್.ಪಿ. ಸಿಇಓ ಲಭ್ಯ

ಬೆಳಗಾವಿ : ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರು ಶುಕ್ರವಾರ(ಅ.14) ಬೈಲಹೊಂಗಲ ಮತ್ತು ಸವದತ್ತಿ ತಹಶೀಲ್ದಾರ ಕಚೇರಿಗಳಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯವಿರಲಿದ್ದಾರೆ.

ಬೈಲಹೊಂಗಲ ತಹಶೀಲ್ದಾರ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆ ಮತ್ತು ಸವದತ್ತಿ ತಹಶೀಲ್ದಾರ ಕಚೇರಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕ ಭೇಟಿಗೆ ಲಭ್ಯವಿರಲಿದ್ದಾರೆ.

ಈ ಎರಡೂ ತಾಲ್ಲೂಕಿನ ಸಾರ್ವಜನಿಕರು ನಿಗದಿತ ಅವಧಿಯಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.