LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಧರ್ಮಸ್ಥಳ ಪ್ರಕರಣ: 7,000 ಪುಟಗಳ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ

ಬೆಳ್ತಂಗಡಿ, 15: ರಾಜ್ಯದ ಗಮನ ಸೆಳೆದಿದ್ದ ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ಸುಮಾರು ಒಂದು ವರ್ಷದ ತನಿಖೆ ಪೂರ್ಣಗೊಳಿಸಿ, 7,000ಕ್ಕೂ ಹೆಚ್ಚು ಪುಟಗಳ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ತನಿಖೆ ವೇಳೆ ಸಂಗ್ರಹಿಸಲಾದ ದಾಖಲೆಗಳು, ಸಾಕ್ಷ್ಯಾಧಾರಗಳು, ವಿಧಿವಿಜ್ಞಾನ ವರದಿಗಳು ಹಾಗೂ ಇತರ ದಾಖಲೆಗಳನ್ನು ವರದಿಯೊಂದಿಗೆ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಧರ್ಮಸ್ಥಳ ಹಾಗೂ ಸುತ್ತಮುತ್ತ ನಡೆದಿವೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆಗಳು, ಲೈಂಗಿಕ ದೌರ್ಜನ್ಯ, ಕೊಲೆ ಹಾಗೂ ಪ್ರಕರಣಗಳನ್ನು ಮುಚ್ಚಿಹಾಕಿರುವ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 20 ಸದಸ್ಯರ ಎಸ್‌ಐಟಿ ರಚಿಸಿತ್ತು.

ಪ್ರಕರಣದ ಆರಂಭಿಕ ಹಂತದಲ್ಲಿ ಮಾಜಿ ನೈರ್ಮಲ್ಯ ಕಾರ್ಮಿಕ ಸಿ.ಎನ್. ಚಿನ್ನಯ್ಯ, 1995ರಿಂದ 2014ರ ನಡುವೆ ಹಲವು ಮಹಿಳೆಯರು ಹಾಗೂ ಅಪ್ರಾಪ್ತರ ಶವಗಳ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಮ್ಮನ್ನು ಒತ್ತಾಯಿಸಲಾಗಿತ್ತು ಎಂದು ಆರೋಪಿಸಿದ್ದರು. ತನಿಖೆಯ ಭಾಗವಾಗಿ ಎಸ್‌ಐಟಿ 15 ಸ್ಥಳಗಳಲ್ಲಿ ಉತ್ಖನನ ನಡೆಸಿ ಅಸ್ಥಿಪಂಜರದ ಅವಶೇಷಗಳು ಹಾಗೂ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿತ್ತು.

ಬಳಿಕ ಚಿನ್ನಯ್ಯ ಅವರ ಹೇಳಿಕೆಗಳಲ್ಲಿ ಅಸಂಗತತೆ ಕಂಡುಬಂದ ಹಿನ್ನೆಲೆಯಲ್ಲಿ ಸುಳ್ಳು ಸಾಕ್ಷ್ಯ ನೀಡಿದ ಆರೋಪದಡಿ ಅವರನ್ನು ಬಂಧಿಸಲಾಗಿತ್ತು. ನಂತರ ಅವರು ಕರ್ನಾಟಕ ಹೈಕೋರ್ಟ ಮೊರೆ ಹೋಗಿ, ತಮ್ಮ ಮೇಲೆ ಒತ್ತಡ ಹೇರಿ ಆರೋಪ ಮಾಡಿಸಲಾಗಿತ್ತು ಎಂದು ಹೇಳಿಕೆ ನೀಡಿದ್ದರು. ಬಳಿಕ ಅವರಿಗೆ ಜಾಮೀನು ದೊರೆತಿತ್ತು.

ಎಸ್‌ಐಟಿ ಸಲ್ಲಿಸಿರುವ ಅಂತಿಮ ವರದಿಯನ್ನು ಪರಿಶೀಲಿಸಿದ ಬಳಿಕ ಮುಂದಿನ ಕಾನೂನು ಕ್ರಮಗಳ ಕುರಿತು ನ್ಯಾಯಾಲಯ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ರೂ. ವಂಚನೆ ಪ್ರಕರಣ!ಬೆಳಗಾವಿಯಲ್ಲಿ ಗುಂಡಿನ ದಾಳಿ: ಆರೋಪಿಗಳ ಬಂಧನಕ್ಕೆ ಎರಡು ವಿಶೇಷ ತಂಡ ರಚನೆಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ ಉಮಾ ಶಂಕರಿಸೋನಮ್ ವಾಂಗಚುಕ್ ಆರೋಗ್ಯ ಗಂಭೀರ; ಬಲವಂತವಾಗಿ ಆಹಾರ ನೀಡುವಂತೆ ದೆಹಲಿ ಹೈಕೋರ್ಟನಲ್ಲಿ ಅರ್ಜಿಇ.ಡಿ ಸಮನ್ಸ್ ಬೆನ್ನಲ್ಲೇ ಮಮತಾ ಬಣ ತೊರೆದ ಮದನ್ ಮಿತ್ರಾಬಾಹ್ಯಾಕಾಶ ನಿಲ್ದಾಣ ತಲುಪಿದ ಭಾರತೀಯ ಮೂಲದ ಅನಿಲ ಮೆನನ್ಅಮೆರಿಕ ದಿಗ್ಬಂಧನಕ್ಕೆ ಇರಾನ್ ತಿರುಗೇಟು; ತೈಲ ರಫ್ತು ಸ್ಥಗಿತದ ಎಚ್ಚರಿಕೆಧರ್ಮಸ್ಥಳ ಪ್ರಕರಣ: 7,000 ಪುಟಗಳ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ'ಸ್ತನ ಹಿಡಿದರೆ ಅತ್ಯಾಚಾರ ಯತ್ನವಲ್ಲ' ಎಂದ ಹೈಕೋರ್ಟ: ಸುಪ್ರೀಮ ಕೋರ್ಟ ತರಾಟೆಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ; 30ಕ್ಕೂ ಹೆಚ್ಚು ತಹಶೀಲ್ದಾರಗಳಿಗೆ ಹೊಸ ನಿಯುಕ್ತಿ