LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಿಜಾಬ್ ವಿಷಯದಲ್ಲಿ ನ್ಯಾಯಮೂರ್ತಿಗಳ ವಿಭಿನ್ನ ತೀರ್ಪು : ಸಿಜೆಐ ಪೀಠಕ್ಕೆ ವರ್ಗಾವಣೆ

ಹೊಸದಿಲ್ಲಿ: ಶಾಲಾ - ಕಾಲೇಜುಗಳಲ್ಲಿ ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗಳ ಮೇಲೆ ಸುಪ್ರೀಮ ಕೋರ್ಟ​ನಲ್ಲಿ ವಿಭಿನ್ನ ತೀರ್ಪು ಪ್ರಕಟವಾಯಿತು.



ಓರ್ವ ನ್ಯಾಯಮೂರ್ತಿ ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿಯನ್ನು ವಜಾಗೊಳಿಸಿದರೆ, ಇನ್ನೋರ್ವರು ಹೈಕೋರ್ಟ​ ಆದೇಶವನ್ನು ರದ್ದು ಮಾಡಿದರು.



ಈ ಎರಡು ವಿಭಿನ್ನ ತೀರ್ಪಿನಿಂದ ಜನರಲ್ಲಿನ ಗೊಂದಲಕ್ಕೆ ಮತ್ತಷ್ಟು ನೀರೆರೆದಂತಾಗಿದೆ. ಇದೀಗ ಹಿಜಾಬ್​ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.



ನ್ಯಾಯಪೀಠದ ಸದಸ್ಯ ನ್ಯಾಯಮೂರ್ತಿ ಹೇಮಂತ ಗುಪ್ತಾ ಅವರು ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿಯನ್ನು ವಜಾಗೊಳಿಸಿದರೆ, ಮತ್ತೋರ್ವ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಹಿಬಾಜ್​ ನಿಷೇಧ​ ಮಾಡಿ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದರು. ನ್ಯಾಯಮೂರ್ತಿಗಳಲ್ಲೇ ವಿಭಿನ್ನ ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.



ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್​ಗೆ ಅವಕಾಶವಿಲ್ಲ. ಮುಂದಿನ ತೀರ್ಪು ಬರುವವರೆಗೂ ಹೈಕೋರ್ಟ​ ತೀರ್ಪನ್ನೇ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ.



ಸಿಜೆಐ ಪೀಠಕ್ಕೆ ಪ್ರಕರಣ ವರ್ಗಾವಣೆ ಆಗಿದ್ದು, ಮುಂದೆ ಸಿಜೆಐ ಅವರು ವಿಸ್ತ್ರತ ಪೀಠ ರಚನೆ ಮಾಡಲಿದ್ದು, ಅಲ್ಲಿ ಪ್ರಕರಣ ಇತ್ಯರ್ಥ ಆಗುವ ವರೆಗೂ ಹೈಕೋರ್ಟ​ ತೀರ್ಪನ್ನೇ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ