ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎರಡು ಮಕ್ಕಳ ನಿಯಮ ಜಾರಿಗೆ ಸಲ್ಲಿಸಿದ ಅರ್ಜಿ ವಜಾ 

ಹೊಸದಿಲ್ಲಿ: ದೇಶದಲ್ಲಿ ಜನಸಂಖ್ಯಾ ನಿಯಂತ್ರಣ ನೀತಿ ಮತ್ತು ಎರಡು ಮಕ್ಕಳ ನಿಯಮ ಜಾರಿಗೊಳಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಮ ಕೋರ್ಟ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಎಸ್.ಕೌಲ್ ಮತ್ತು ಅಭಯ ಎಸ್. ಓಕಾ ಅವರ ಪೀಠವು, ಇದನ್ನು ಕಾನೂನು ಆಯೋಗಕ್ಕೆ ಶಿಫಾರಸು ಮಾಡುವಂತೆ ವಕೀಲ ಅಶ್ವಿನಿ ಕುಮಾರ ಉಪಾಧ್ಯಾಯ ಅವರು ಪಿಐಎಲ್ ನಲ್ಲಿ ಸಲ್ಲಿಸಿದ್ದ ಕೋರಿಕೆಯನ್ನೂ ತಿರಸ್ಕರಿಸಿತು.

ಈ ಸಾಮಾಜಿಕ ಸಮಸ್ಯೆಯನ್ನು ಸರ್ಕಾರ ನೋಡಿಕೊಳ್ಳಲಿದೆ. ಆದಾಗ್ಯೂ, ದೇಶದಲ್ಲಿ ಜನಸಂಖ್ಯೆ ಬೆಳವಣಿಗೆ ಇಳಿಮುಖದಲ್ಲಿದೆ. ಅಷ್ಟಕ್ಕೂ ನ್ಯಾಯಾಲಯ ಹಸ್ತಕ್ಷೇಪ ಮಾಡುವಂತಹ ಸಮಸ್ಯೆ ಇದಲ್ಲ. ನಮಗೆ ಮಾಡಲು ಇದಕ್ಕಿಂತಲೂ ಅತ್ಯುತ್ತಮ ಕೆಲಸಗಳು ಬಾಕಿ ಇವೆ ಎಂದು ಪೀಠ ಮೌಖಿಕವಾಗಿ ಹೇಳಿದೆ.

ನಿಮಗೆ ಪ್ರಚಾರ ಬೇಕಾಗಿದೆ. ಪ್ರಚಾರ ಕೊಡುವುದು ನಮ್ಮ ಕೆಲಸವಲ್ಲ. ಈ ಅರ್ಜಿಯನ್ನು ನಾವು ಮುಂದುವರಿಸುವುದಿಲ್ಲ ಎಂದು ಅರ್ಜಿದಾರರಿಗೆ ನ್ಯಾಯಾಲಯ ತಿಳಿಸಿದೆ.

ಕೇಂದ್ರ ಸರ್ಕಾರ ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಅವರು, ಜನಸಂಖ್ಯೆ ಏರಿಕೆ ನಿಯಂತ್ರಿಸಲು ನಾವು ಏನೆಲ್ಲಾ ಮಾಡಬಹುದು ಅದೆಲ್ಲವನ್ನೂ ಮಾಡುತ್ತಿದ್ದೇವೆ ಎಂದು ಪೀಠಕ್ಕೆ ತಿಳಿಸಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.