LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಡಿ.ಕೆ. ಸಂಪುಟ ವಿಸ್ತರಣೆ : 19 ಸಚಿವರ ಪ್ರಮಾಣ ವಚನ, ಮಹಿಳೆಯರಿಗೆ ಸಿಗಲಿಲ್ಲ ಅವಕಾಶ

ಬೆಂಗಳೂರು, ಆಗಸ್ಟ್ 3: ಕಳೆದ ಎರಡು ತಿಂಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸೋಮವಾರ ಪೂರ್ಣಗೊಂಡಿದ್ದು, 19 ನೂತನ ಸಚಿವರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ಸಚಿವರಿಗೆ ಖಾತೆ ಹಂಚಿಕೆ ಮಾತ್ರ ಇನ್ನೂ ಬಾಕಿಯಿದೆ.

ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ, ಈಗಾಗಲೇ ಸಚಿವರಾಗಿರುವ ಹಲವು ನಾಯಕರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಮಹಿಳಾ ಪ್ರಾತಿನಿಧ್ಯಕ್ಕೆ ಅವಕಾಶ ಸಿಗಲಿಲ್ಲ

ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯ ಪ್ರಮುಖ ಚರ್ಚೆಯ ವಿಷಯವೆಂದರೆ ಮಹಿಳೆಯರಿಗೆ ಸಚಿವ ಸ್ಥಾನ ದೊರೆಯದಿರುವುದು. ಸಾಮಾನ್ಯವಾಗಿ ಸಚಿವ ಸಂಪುಟದಲ್ಲಿ ಕನಿಷ್ಠ ಒಬ್ಬ ಮಹಿಳೆಗೆ ಅವಕಾಶ ಕಲ್ಪಿಸಲಾಗುತ್ತಿತ್ತು. ಆದರೆ ಈ ಬಾರಿ ಪ್ರಮಾಣ ವಚನ ಸ್ವೀಕರಿಸಿದ 19 ಸಚಿವರಲ್ಲಿ ಒಬ್ಬ ಮಹಿಳೆಯೂ ಇಲ್ಲ.

ಮೊದಲ ಹಂತದ ಪಟ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತವೀರಗೌಡ ಅವರ ಹೆಸರು ಕಾಣಿಸಿಕೊಂಡಿದ್ದರೂ, ಅಂತಿಮ ಪಟ್ಟಿಯಿಂದ ಅದು ಕೈಬಿಡಲಾಯಿತು. ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೂ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ವ್ಯಕ್ತವಾಗಿದ್ದರೂ, ಅಂತಿಮವಾಗಿ ಅವರಿಗೆ ಅವಕಾಶ ಸಿಗಲಿಲ್ಲ. ಮುಂದಿನ ದಿನಗಳಲ್ಲಿ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಬದಲಾವಣೆ ನಡೆದರೆ ಮಹಿಳಾ ಪ್ರತಿನಿಧಿಯಾಗಿ ಅವರಿಗೆ ಅವಕಾಶ ದೊರೆಯಬಹುದು ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ.

ಉತ್ತರ ಕನ್ನಡಕ್ಕೆ ನಿರಾಸೆ

ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಯಾವುದೇ ಪ್ರಾತಿನಿಧ್ಯ ದೊರೆಯದಿರುವುದು ಮತ್ತೊಂದು ಚರ್ಚೆಗೆ ಕಾರಣವಾಗಿದೆ. ಆರಂಭಿಕ ಪಟ್ಟಿಯಲ್ಲಿ ಮಂಕಾಳು ವೈದ್ಯ ಅವರ ಹೆಸರು ಕಾಣಿಸಿಕೊಂಡಿದ್ದರೂ, ಬಳಿಕ ಪಟ್ಟಿಯಲ್ಲಿ ತಿದ್ದುಪಡಿ ಮಾಡಿ ಅವರ ಹೆಸರನ್ನು ಕೈಬಿಡಲಾಯಿತು. ಅಂತಿಮವಾಗಿ ದಾವಣಗೆರೆ ಉತ್ತರ ಕ್ಷೇತ್ರದ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದರಿಂದ ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ಅಲ್ಪಸಂಖ್ಯಾತರಿಗೆ ಮೂರು ಸ್ಥಾನ

ಕಾಂಗ್ರೆಸ್‌ ಗದ್ದುಗೆ ಹಿಡಿಯಲು ಪ್ರಮುಖ ಕಾರಣಕರ್ತರಾದ ಅಲ್ಪಸಂಖ್ಯಾತ ಮುಸ್ಲಿಮ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಮೂರು ಸ್ಥಾನಗಳು ಮಾತ್ರ ದೊರೆತಿವೆ. ಕೊನೆಯ ಕ್ಷಣದವರೆಗೂ ಜಮೀರ ಅಹ್ಮದ ಖಾನ್ ಅವರ ಹೆಸರು ಕುರಿತು ಊಹಾಪೋಹಗಳು ನಡೆದಿದ್ದರೂ, ಅಂತಿಮವಾಗಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರೊಂದಿಗೆ ರಿಜ್ವಾನ್ ಅರ್ಶದ ಪ್ರಮಾಣ ವಚನ ಸ್ವೀಕರಿಸಿದರು.

 

ನೂತನ ಸಚಿವರ ಪಟ್ಟಿ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು:

  • ಅಜಯ ಧರ್ಮಸಿಂಗ್ (ಜೇವರ್ಗಿ)
  • ಹೆಚ್.ಸಿ.ಬಾಲಕೃಷ್ಣ (ಮಾಗಡಿ)
  • ಕೆ.ಎಸ್.ಬಸವಂತಪ್ಪ (ಮಾಯಕೊಂಡ)
  • ಬಸವರಾಜ ರಾಯರೆಡ್ಡಿ (ಯಲಬುರ್ಗ)
  • ಎನ್.ಚಲುವರಾಯಸ್ವಾಮಿ (ನಾಗಮಂಗಲ)
  • ಲಕ್ಷ್ಮಣ ಸವದಿ (ಅಥಣಿ)
  • ಮಧು ಬಂಗಾರಪ್ಪ (ಸೊರಬ)
  • ಎಸ್.ಎಸ್.ಮಲ್ಲಿಕಾರ್ಜುನ (ದಾವಣಗೆರೆ ಉತ್ತರ)
  • ಬಿ.ನಾಗೇಂದ್ರ (ಬಳ್ಳಾರಿ ಗ್ರಾಮಾಂತರ)
  • ಪಿ.ಎಂ.ನರೇಂದ್ರಸ್ವಾಮಿ (ಮಳವಳ್ಳಿ)
  • ಪುಟ್ಟರಂಗಶೆಟ್ಟಿ (ಚಾಮರಾಜನಗರ)
  • ಟಿ.ರಘುಮೂರ್ತಿ (ಚಳ್ಳಕೆರೆ)
  • ರಿಜ್ವಾನ್ ಅರ್ಶದ್ (ಶಿವಾಜಿನಗರ)
  • ರುದ್ರಪ್ಪ ಲಮಾಣಿ (ಹಾವೇರಿ)
  • ಸಂತೋಷ ಲಾಡ್ (ಕಲಘಟಗಿ)
  • ಕೆ.ಎಂ.ಶಿವಲಿಂಗೇಗೌಡ (ಅರಸೀಕೆರೆ)
  • ಶಿವರಾಜ ತಂಗಡಗಿ (ಕನಕಗಿರಿ)
  • ವಿಜಯಾನಂದ ಕಾಶಪ್ಪನವರ (ಹುನಗುಂದ)
  • ಜಮೀರ್ ಅಹ್ಮದ್ ಖಾನ್ (ಚಾಮರಾಜಪೇಟೆ)

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ