ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಒಬ್ಬರಿಗೆ ಒಂದೇ ಟಿಕೆಟ್; ಸಿದ್ದರಾಮಯ್ಯಗೆ ಟಾಂಗ್ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಬ್ಬರಿಗೆ ಒಂದೇ ಟಿಕೆಟ್ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ, ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಆನಂತರ ಎಲ್ಲರಿಗೂ ಅಧಿಕಾರ ಸಿಗುತ್ತೆ ಎಂದರು.

ಪ್ರತಿಯೊಬ್ಬರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರ ಶಕ್ತಿ ಎಷ್ಟಿದೆ ಎಂದು ಹೇಳಲು ಆಗಲ್ಲ. ಒಬ್ಬರಿಗೆ 100 ಬೂತ್ ನಿಭಾಯಿಸುವ ಶಕ್ತಿ ಇದ್ದರೆ, ಮತ್ತೆ ಕೆಲವರಿಗೆ 50, ಇನ್ನೂ ಕೆಲವರಿಗೆ 10 ಬೂತ್ ನಿಭಾಯಿಸುವ ಶಕ್ತಿ ಇರುತ್ತದೆ’ ಎಂದು ಹೇಳಿದರು.

ಇನ್ನು ಅರ್ಜಿ ಸಲ್ಲಿಸುವಾಗ ಆಕಾಂಕ್ಷಿಗಳಿಂದ ದೇಣಿಗೆ ಸಂಗ್ರಹ ವಿಚಾರವಾಗಿ ಮಾತನಾಡಿದ ಡಿ.ಕೆ.ಶಿವಕುಮಾರ, ಇದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಈಗ ಸುದ್ದಿಯಾಗಿದೆ ಅಷ್ಟೇ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ಎಂದು ಹೇಳಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.