ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊರೋನಾ ಬಗ್ಗೆ ಆತಂಕ ಬೇಡ, ಜಾಗ್ರತೆ ವಹಿಸಿ

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಆತಂಕ ಹೆಚ್ಚುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲರೂ ಮಾಸ್ಕ ಧರಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ ಮನವಿ ಮಾಡಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ನಿಯಂತ್ರಣ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಎಲ್ಲರೂ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕ ಧರಿಸಬೇಕು ಎಂದರು.

ಕೋವಿಡ್ ಬಗ್ಗೆ ಎಲ್ಲರೂ ಮುಂಜಾಗೃತೆ ವಹಿಸಿರಿ. ಜನಸಂದಣಿ, ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ ಧರಿಸುವ ಅಗತ್ಯವಿದೆ. ಕೊರೊನಾ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಆದರೆ ಎಲ್ಲರೂ ಜಾಗೃತಿ ವಹಿಸುವುದು ಉತ್ತಮ ಎಂದು ಹೇಳಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.