ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೂರು ಸಿದ್ದರಾಮಯ್ಯ ಬಂದರೂ ಹೆದರುವ ಪ್ರಶ್ನೆಯೇ ಇಲ್ಲ

ಬಾಗಲಕೋಟ : ಸಿದ್ದರಾಮೋತ್ಸವದ ಯಶಸ್ಸಿನಿಂದ ಬಿಜೆಪಿಯವರಿಗೆ ಹೆದರಿಕೆ ಶುರುವಾಗಿದೆ ಎಂದು ಕಾಂಗ್ರೆಸ್ ಹೇಳಿಕೆಗೆ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರು ಸಿದ್ದರಾಮಯ್ಯನವರು ಬಂದರೂ ಸಹ ಹೆದರುವ ಪ್ರಶ್ನೆಯೇ ಇಲ್ಲ. ಬಿಜೆಪಿಯ ಒಬ್ಬ ಶಾಸಕರಿದ್ದ ಸಂದರ್ಭದಲ್ಲೂ ನಾವು ಎದೆಗುಂದಿಲ್ಲ. ಇದೀಗ ಬಿಜೆಪಿ ವಿಶ್ವದಲ್ಲಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಂಪಣ್ಣ ಕಳೆದ 20 ವರ್ಷಗಳಿಂದ ಯಾವ ಕಾಮಗಾರಿ ಮಾಡಿದ್ದಾರೆ ತೋರಿಸಲಿ, ತಮ್ಮ ಆರೋಪದ ಕುರಿತಂತೆ ದಾಖಲೆ ನೀಡಲು ದೆಹಲಿಗೆ ಬರುವಂತೆ ಕರೆದರೂ ಅವರು ಹೋಗಿಲ್ಲ ಎಂದು ಕಿಡಿಕಾರಿದ್ದಾರೆ.

 
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.