LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ತಲೆಗೆ ಗುಂಡು ಹಾರಿಸಿಕೊಂಡು ಕೆಎಲ್ಇ ಆಸ್ಪತ್ರೆಯ ಖ್ಯಾತ ವೈದ್ಯ ಡಾ.ದಿನೇಶ ಭಟ್ಕಳ ಆತ್ಮಹತ್ಯೆ

ಬೆಳಗಾವಿ, ಮೇ 22 : ನಗರದ ಮಂಡೋಲಿ ರಸ್ತೆಯಲ್ಲಿನ ನಿವಾಸದಲ್ಲಿ ಖ್ಯಾತ ವೈದ್ಯ ಡಾ. ದಿನೇಶ ಲಕ್ಷ್ಮಣ ಭಟ್ಕಳ (79) ಅವರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಘಟನೆ ವೈದ್ಯ ವಲಯದಲ್ಲಿ ಹಾಗೂ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾದ ಡಾ. ಭಟ್ಕಳ ಅವರು ಕಳೆದ 4 ದಶಕಗಳಿಂದ ಕೆಎಲ್ಇ ಸಂಸ್ಥೆಯಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದರು. ಅಂಕೋಲಾದ ಕೆಎಲ್ಇ ಆಸ್ಪತ್ರೆಯ ಆಡಳಿತಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದ ಅವರು, ಬಳಿಕ ಬೆಳಗಾವಿಯಲ್ಲಿ ನೆಲೆಸಿ ಕೆಎಲ್ಇ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಸರಳ ಜೀವನ ಶೈಲಿ, ರೋಗಿಗಳೊಂದಿಗೆ ಆತ್ಮೀಯ ನಡೆ ಹಾಗೂ ಸೇವಾ ಮನೋಭಾವದಿಂದ ಅವರು ವೈದ್ಯ ವಲಯದಲ್ಲಿ ವಿಶೇಷ ಗೌರವ ಪಡೆದಿದ್ದರು. ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ಅವರು ಸಮಾಜದಲ್ಲಿಯೂ ಸ್ನೇಹಪರ ವ್ಯಕ್ತಿತ್ವದಿಂದ ಪರಿಚಿತರಾಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಕೆಲವು ವರ್ಷಗಳಿಂದ ಅವರು ಶ್ವಾಸಕೋಶ ಕ್ಯಾನ್ಸರನಿಂದ ಬಳಲುತ್ತಿದ್ದರು ಎನ್ನಲಾಗಿದೆ. ತೀವ್ರ ಎದೆನೋವಿನಿಂದ ಮಾನಸಿಕವಾಗಿ ನೊಂದಿದ್ದ ಹಿನ್ನೆಲೆ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಆತ್ಮಹತ್ಯೆಗೆ ಮುನ್ನ ಕೆಎಲ್ಇ ಸಂಸ್ಥೆಯ ಮುಖ್ಯಸ್ಥ ಡಾ. ಪ್ರಭಾಕರ ಕೋರೆ ಅವರಿಗೆ ವಾಟ್ಸಪ್‌ ಸಂದೇಶ ಕಳುಹಿಸಿರುವ ಮಾಹಿತಿ ಲಭ್ಯವಾಗಿದೆ. ನಾನು ತೀವ್ರ ಎದೆನೋವಿನಿಂದ ಬಳಲುತ್ತಿದ್ದೇನೆ. ಆದ್ದರಿಂದ ಈ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಮಾಡಿ ಹಾಗೂ ನಗರ ಪೊಲೀಸ್‌ ಆಯುಕ್ತರಿಗೆ ಮಾಹಿತಿ ನೀಡಿ ಎಂದು ಸಂದೇಶದಲ್ಲಿ ಉಲ್ಲೇಖಿಸಿದ್ದರು. ತಮಗೆ ಚಿಕಿತ್ಸೆ ನೀಡುತ್ತಿದ್ದ ಡಾ. ಕೇರೂರ ಅವರಿಗೂ ಅವರು ಸಂದೇಶ ಕಳುಹಿಸಿದ್ದಾಗಿ ತಿಳಿದು ಬಂದಿದೆ.

ಶುಕ್ರವಾರ ಬೆಳಿಗ್ಗೆ ತಮ್ಮ ಮನೆಯ ಬಾಲ್ಕನಿಯಲ್ಲಿ ತಾವೇ ತಮ್ಮ ಮೇಲೆ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಸದ್ದು ಕೇಳಿ ಮನೆಯವರು ಹಾಗೂ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಿಲಕವಾಡಿ ಠಾಣೆ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸ್ಥಳದಲ್ಲಿದ್ದ ಶಸ್ತ್ರಾಸ್ತ್ರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟಿಳಕವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಮರುಕಳಿಸದು : ಮತ್ತೆ ಭರವಸೆ ನೀಡಿದ ಧರ್ಮೇಂದ್ರ ಪ್ರಧಾನನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ : ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಕಾಕ್ರೋಚ್‌ ಜನತಾ ಪಕ್ಷದ ಆನ್‌ಲೈನ್‌ ಅಭಿಯಾನಮೌಂಟ್‌ ಎವರೆಸ್ಟ ಇಳಿಯುವಾಗ ಇಬ್ಬರು ಭಾರತೀಯ ಪರ್ವತಾರೋಹಿಗಳ ಸಾವುರಾಷ್ಟ್ರೀಯ ಭದ್ರತೆ ಕಾರಣ ಕಾಕ್ರೋಚ್‌ ಜನತಾ ಪಕ್ಷ ಎಕ್ಸ ಖಾತೆ ನಿರ್ಬಂಧಕಾಕ್ರೋಚ್‌ ಹೀಗೆ ಮಾವು ತಿನ್ನುತ್ತವೆ ಎಂದು ಪ್ರಧಾನಿ ಮೋದಿ ವಿರುದ್ಧ ನಟ ಪ್ರಕಾಶ ವ್ಯಂಗ್ಯ ವಿಡಿಯೋ ವೈರಲ್‌ದ್ವೇಷ ರಾಜಕಾರಣ ಬೇಡ; ಭಾರತೀಯ ಕುಸ್ತಿ ಒಕ್ಕೂಟಕ್ಕೆ ದಿಲ್ಲಿ ಹೈಕೋರ್ಟ ತೀವ್ರ ತರಾಟೆ : ವಿನೇಶ ಫೋಗಟ್‌ ಅನರ್ಹತೆಗೆ ನಿರ್ಧಾರಕ್ಕೆಬೆಂಗಳೂರಿನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ; 180 ಪ್ರಯಾಣಿಕರು ಸುರಕ್ಷಿತತಲೆಗೆ ಗುಂಡು ಹಾರಿಸಿಕೊಂಡು ಕೆಎಲ್ಇ ಆಸ್ಪತ್ರೆಯ ಖ್ಯಾತ ವೈದ್ಯ ಡಾ.ದಿನೇಶ ಭಟ್ಕಳ ಆತ್ಮಹತ್ಯೆಇರಾನ್‌ ಯುದ್ಧದ ಕಾರಣ ಪುತ್ರನ ಮದುವೆಗೂ ಹೋಗಲಾಗುತ್ತಿಲ್ಲ: ಟ್ರಂಪ್‌ಜೂನ್‌ 18ರಂದು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ : ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ಮತದಾನ