LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಕಲ್ಲು ತೂರಾಟ, ತಲ್ವಾರ್ ಝಳಪಿಸಿದವರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ : ಶಹಾಪುರದ ಮರಾಠಾ ವಿದ್ಯಾಮಂದಿರ ಶಾಲೆಯ ಮೈದಾನದಲ್ಲಿ ಗುರುವಾರ ಸಂಜೆ ಎರಡು ಅಪ್ರಾಪ್ತ ವಯಸ್ಸಿನ ತಂಡ ಕ್ರಿಕೆಟ್ ಮ್ಯಾಚ್ ಆಡಿದೆ. ತುರುಸಿನಿಂದ ನಡೆದ ಪಂದ್ಯದಲ್ಲಿ ಗೆದ್ದ ತಂಡ ಸಂಭ್ರಮಾಚರಣೆಯಲ್ಲಿ ತೊಡಗಿದ್ದರೆ, ಸೋತ ತಂಡ ಅವರ ಮೇಲೆ ಹಲ್ಲೆ ಮಾಡಿದೆ. ಆಗ ಅಲ್ಲಿಯೇ ಇದ್ದ ಹಿರಿಯರೂ ಹೊಡೆದಾಟದಲ್ಲಿ ಭಾಗಿಯಾಗಿದ್ದರು.



ಅಷ್ಟಕ್ಕೇ ಮುಗಿದಿದ್ದ ಹೊಡೆದಾಟ ಸಂಜೆ ಸುಮಾರು

6.30 ಗಂಟೆಗೆ ತಾವು ವಾಸವಾಗಿರುವ ಅಳವಣ ಗಲ್ಲಿಯಲ್ಲೂ ಮುಂದುವರೆದು ಕೋಮು ಸಂಘರ್ಷಕ್ಕೆ ಕಾರಣವಾಗಿದೆ. ಒಂದು ಕೋಮಿನ ಯುವಕರು ಇನ್ನೊಂದು ಕೋಮಿನವರ ಮನೆಗಳಿಗೆ ಕಲ್ಲೆಸೆದಿದ್ದಾರೆ. ಎರಡೂ ಗುಂಪಿನವರು ತಲವಾರ್ ಮುಂತಾದ ಮಾರಕಾಸ್ತ್ರಗಳನ್ನು ಪ್ರದರ್ಶಿಸಿದ್ದು ಆಗ ಸ್ಥಳಕ್ಕೆ ಓರ್ವ ಮಹಿಳಾ ಪೊಲೀಸ್ ಅಧಿಕಾರಿ ಮತ್ತು ಓರ್ವ ಪೇದೆ ಆಗಮಿಸಿದ್ದಾರೆ. ಅದನ್ನು ಕಂಡು ಎಲ್ಲರೂ ಪಲಾಯನಗೈದಿದ್ದಾರೆ. ಆಗ ಓರ್ವ ತನ್ನ ತಲವಾರ್ ರಸ್ತೆಗೆ ಎಸೆದಿದ್ದಾನೆ.



ಕಲ್ಲು ತೂರಾಟದಲ್ಲಿ ನಿರತರಾಗಿದ್ದವರ ಮತ್ತು ತಲವಾರ್ ಪ್ರದರ್ಶಿಸಿದ್ದವರ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಸೇರಿದಂತೆ  ಐಪಿಸಿ ಸೆಕ್ಷನ್ 143, 147,148, 323, 324, 354, 504, 506, 153a ಮತ್ತು 149-ರಡಿ ಪ್ರಕರಣ ದಾಖಲಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ