LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕೆಇಬಿ ವಿದ್ಯುತ್ ಕೇಂದ್ರಕ್ಕೆ ಬೆಂಕಿ ; ೨-೩ ದಿನ ವಿದ್ಯುತ್ ವ್ಯತ್ಯಯ

ಅಥಣಿ : ಅಥಣಿಯ 110 ಕೆ.ವಿ ವಿದ್ಯುತ್ ಕೇಂದ್ರದಲ್ಲಿ ಬೃಹತ್ ವಿದ್ಯುತ್ ಅವಘಡ ಸಂಭವಿಸಿ, ಬೆಂಕಿ ತನ್ನ ಕೆನ್ನಾಲಿಗೆ ಚಾಚಿ ಇಡೀ ವಿದ್ಯುತ್ ಕೇಂದ್ರವನ್ನೇ ವ್ಯಾಪಿಸುವಷ್ಟು ಜ್ವಾಲೆ ಹರಡಿ ಸಾರ್ವಜನಿಕರಲ್ಲಿ ಭಯ ಮೂಡಿಸಿತ್ತು.



ಅಥಣಿ ಪಟ್ಟಣದ ವಿಜಯಪುರ ರಸ್ತೆಗೆ ಹೊಂದಿಕೊಂಡ ವಿದ್ಯುತ್ ಕೇಂದ್ರದಲ್ಲಿ ಬೆಳಿಗ್ಗೆ ಸುಮಾರು 09:15 ಕ್ಕೆ ಬೆಂಕಿ ಹತ್ತಿದ್ದು , ಆಯಿಲ್ ಸೋರಿಕೆಯಿಂದ ಬೆಂಕಿ ಹತ್ತಿ ಉರಿದಿರಬಹುದು ಎಂದು ಅಧಿಕಾರಿ ಶಂಕೆ ವ್ಯಕ್ತಪಡಿಸಿದ್ದಾರೆ .



ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಕೋಟ್ಯಾಂತರ ರೂ ಮೌಲ್ಯದ ಟ್ರಾನ್ಸಫಾರ್ಮರ್ ಆದಿ ವಸ್ತುಗಳು ಸುಟ್ಟುಕರಕಲಾಗಿವೆ. ಬೆಂಕಿ ಆರಿಸಲು ಅಗ್ನಿಶಾಮಕದಳ ಸಿಬ್ಬಂದಿಗಳು ಹರಸಾಹಸ ಪಟ್ಟರು.

ಅಕ್ಕ ಪಕ್ಕ ಯಾವುದೇ ಮನೆ ಇಲ್ಲದ ಕಾರಣ ಯಾವುದೇ ಹಾನಿಯಾಗಿಲ್ಲ.



ಬೆಂಕಿ ಅವಘಡದಿಂದ ಸುಮಾರು ಎರಡು ಮೂರು ದಿನ ಹಲವೆಡೆ ವಿದ್ಯುತ್ ವ್ಯತ್ಯಯವಾಗುವ ಸಂಭವವಿದ್ದು ಮುಖ್ಯವಾಗಿ ಯಕ್ಕಚ್ಚಿ , ಅಥಣಿ ಗ್ರಾಮೀಣ , ಗುಂಡೆವಾಡಿ , ಮಸರಗುಪ್ಪಿ , ತಂಗಡಿ , ಕಟಗೇರಿ , ಬಸವನಗುಡಿ , ಬಡಚಿ, ಮಿನಿ ವಿಧಾನಸೌದಾ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯವಾಗುವುದು ಎಂದು ಅಧಿಕಾರಿಗಳು ತಿಳಿಸಿದರು.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬಿಡೊಲ್ಲ: ರಾಜನಾಥ ಸಿಂಗ್ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ ಸೇಠ್; ಜು.1ರಿಂದ ಅಧಿಕಾರ ಸ್ವೀಕಾರಪರಾರಿ ನೀರವ ಮೋದಿ ಪ್ರಕರಣಕ್ಕೆ ತಿರುವು: ಭ್ರಷ್ಟಾಚಾರದ ಸಾಕ್ಷ್ಯ ಇಲ್ಲ ಎಂದ ಸಿಬಿಐನೀಟ್ ಅಕ್ರಮ, ನಿರುದ್ಯೋಗ ವಿರುದ್ಧ ಕಾಂಗ್ರೆಸ್ ರಣಕಹಳೆ: ರಾಹುಲ್ ನೇತೃತ್ವದಲ್ಲಿ ವಿದ್ಯಾರ್ಥಿ ಸಮಾವೇಶಜೀವ ಕಳೆದುಕೊಂಡ ನಾವಿಕರು, ಧ್ವನಿ ಕಳೆದುಕೊಂಡ ನಾಯಕತ್ವಭಾರತೀಯ ನಾವಿಕರ ಹತ್ಯೆಯ ಕಾವಿನ ನಡುವೆ ಫ್ರಾನ್ಸ, ಸ್ಲೋವೇಕಿಯಾ ದೇಶಗಳ ೧ ವಾರದ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿರೈತರ ಜಮೀನು ಕಬಳಿಸುವ ಯತ್ನ: ಆರ್‌.ಅಶೋಕ ಆರೋಪ4 ಗೋಲುಗಳ ದಾಳಿಯಿಂದ ಅಮೆರಿಕದ ಶುಭಾರಂಭಮಣಿಪುರದಲ್ಲಿ ದಿಗ್ಬಂಧನ: ಪೆಟ್ರೋಲ್ ₹230, ಅಡುಗೆ ಅನಿಲ ₹5,000ಕಾಗದದ ಕಡತಗಳಿಗೆ ವಿದಾಯ: ಪಾಲಿಕೆ ಪಿಐಡಿ ಸೇವೆ ಸಂಪೂರ್ಣ ಆನ್‌ಲೈನ್‌ಗೆ