ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾಜಿ ಸಂಸದ ಮುದ್ದ ಹನುಮೇಗೌಡ, ನಟ ಶಶಿಕುಮಾರ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದ್ದು, ಕಾಂಗ್ರೆಸ್ ನ ಹಲವು ನಾಯಕರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಮುದ್ದ ಹನುಮೇಗೌಡ, ನಟ ಶಶಿಕುಮಾರ, ನಿವೃತ್ತ ಐ ಎ ಎಸ್ ಅಧಿಕಾರಿ ಅನಿಲ ಕುಮಾರ, ಸೇವಾದಳ ರಾಜ್ಯ ಉಪಾಧ್ಯಕ್ಷ ಹನುಮಂತರಾವ ಜವಳಿ, ರಮೇಶ ಮುನಿಯಪ್ಪ, ವೆಂಕಟಾಚಲಯ್ಯ ಸೇರಿದಂತೆ ಹಲವು ನಾಯಕರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು. ಪಕ್ಷದ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್, ಬಿಜೆಪಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ ಜಿ.ವಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ ಸುರಾನ, ಸಚಿವರು, ಶಾಸಕರು ಮೊದಲಾದವರು ಉಪಸ್ಥಿತರಿದ್ದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.