LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಭೀಕರ ಅಪಘಾತ: ವಿದ್ಯಾರ್ಥಿಗಳು ಸೇರಿ ನಾಲ್ವರು ಬಲಿ

ರಾಯಚೂರು: ನರಹರಿ ಆರಾಧನೆಗೆ ಹೊರಟ ವಿದ್ಯಾರ್ಥಿಗಳ ಕ್ರೂಶರ್ ವಾಹನ ಪಲ್ಟಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿ, 10 ಜನರಿಗೆ ಗಾಯಗಳಾದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಮಂಗಳವಾರ ರಾತ್ರಿ ನಡೆದಿದೆ.



ದುರ್ಘಟನೆಯಲ್ಲಿ ಮಂತ್ರಾಲಯ ಸಂಸ್ಕೃತ ಪಾಠ ಶಾಲೆಯ ಮೂರು ವಿದ್ಯಾರ್ಥಿಗಳು ಸೇರಿ ವಾಹನ ಚಾಲಕ ಕೂಡ ಮೃತಪಟ್ಟಿದ್ದಾರೆ. ಮೃತರನ್ನು ಅಯ್ಯವಂದನ್ ( 18), ಸುಜೇಂದ್ರ( 22), ಅಭಿಲಾಷ (20) ಹಾಗೂ ವಾಹನ ಚಾಲಕ ಶಿವಾ(24) ಎಂದು ಗುರುತಿಸಲಾಗಿದೆ.



ಗಾಯಗೊಂಡ 10 ಜನರನ್ನ ರಾಯಚೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಿಂಧನೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿಯೇ ಮೃತದೇಹ ಪೋಸ್ಟ್ ಮಾರ್ಟಮ್ ಮುಗಿಸಿ ಶವಗಳನ್ನ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಸಿಂಧನೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 14 ಜನ ಪ್ರಯಾಣಿಸುತ್ತಿದ್ದ ಕ್ರೂಶರ್ ವಾಹನದ ಆಕ್ಸಲ್ ಕಟ್ ಆಗಿ ಮೂರು ಬಾರಿ ಪಲ್ಟಿ ಹೊಡೆದಿದೆ. ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.



ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ಬೃಂದಾವನಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಪೊಲೀಸ್ ಅಧಿಕಾರಿಗಳು ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಮಂತ್ರಾಲಯ ಶ್ರೀಗಳು ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ