LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಬೆಳಗಾವಿ ಜಿಲ್ಲೆ ವಿಭಜಿಸಿ ಗೋಕಾಕ, ಚಿಕ್ಕೋಡಿ ನೂತನ ಜಿಲ್ಲೆಗಳ ನಿರ್ಮಾಣಕ್ಕೆ ಸರಕಾರದ ನಿರ್ಧಾರ

ಬೆಳಗಾವಿ : ಕನ್ನಡ ಸಂಘಟನೆಗಳ ವಿರೋಧದ ನಡುವೆಯೂ ರಾಜ್ಯ ಸರಕಾರ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಮೂರು ಜಿಲ್ಲೆಗಳನ್ನು ರಚಿಸಲು ನಿರ್ಧರಿಸಿದೆ.



ಆಡಳಿತಾತ್ಮಕ ದೃಷ್ಟಿಯಿಂದ ಬೆಳಗಾವಿಯನ್ನು ವಿಭಜಿಸಿ ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲೆಗಳನ್ನು ನೂತನ ಜಿಲ್ಲೆಗಳನ್ನಾಗಿ ಮಾಡಲಾಗುವುದು ಎಂದು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.



ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 77 ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಅತ್ಯಂತ ದೊಡ್ಡ ಜಿಲ್ಲೆಯಾದ ಬೆಳಗಾವಿ ವಿಭಜನೆಗೆ ಒತ್ತಡ ಇದ್ದು ಸದ್ಯದಲ್ಲೇ ಮೂರು ವಿಭಜನೆ ಮಾಡಲಾಗುವುದು ಎಂದು ಹೇಳಿದ್ದಾರೆ.



ಸದ್ಯ ಬೆಳಗಾವಿ ಜೊತೆಗೆ ಗೋಕಾಕ ಮತ್ತು ಚಿಕ್ಕೋಡಿ ಈ ಎರಡೂ ಹೊಸ ಜಿಲ್ಲೆಗಳನ್ನಾಗಿ ವಿಭಜನೆ ಮಾಡಲಾಗುತ್ತದೆ. ಅಥಣಿ ಮತ್ತು ಬೈಲಹೊಂಗಲ ಸಹ ಪ್ರತ್ಯೇಕ ಜಿಲ್ಲೆಗಳಾಗಬೇಕೆಂದು ಹೋರಾಟ ಮಾಡಲಾಗುತ್ತಿದೆ. ಸಚಿವರ ವಿಭಜನೆ ಹೇಳಿಕೆಗೆ ಕೆಲವು ಪ್ರದೇಶದಿಂದ ವಿರೋಧ ಉಂಟಾಗುವ ಸಾಧ್ಯತೆ ಇದೆ.



ಮಹಾರಾಷ್ಟ್ರದೊಂದಿಗಿನ ಗಡಿ ವಿವಾದ ಇತ್ಯರ್ಥವಾಗುವವರೆಗೂ ಬೆಳಗಾವಿ ಜಿಲ್ಲೆಯನ್ನು ವಿಭಜಿಸುವುದು ಬೇಡ ಎಂದು ಕನ್ನಡ ಸಂಘಟನೆಗಳು ಹೋರಾಟ ಮಾಡಿದ್ದರಿಂದ ಅಂದಿನ ಜೆ ಎಚ್ ಪಟೇಲ್ ಸರಕಾರ ಇತರ ದೊಡ್ಡ ಜಿಲ್ಲೆಗಳನ್ನು ವಿಭಜಿಸಿದರೂ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿರಲಿಲ್ಲ. ಸಚಿವ ಜಾರಕಿಹೊಳಿಯವರ ಹೇಳಿಕೆ ಕನ್ನಡ ಸಂಘಟನೆಗಳ ಮತ್ತೊಂದು ಹೋರಾಟಕ್ಕೆ ಆಸ್ಪದ ನೀಡುವ ಸಾಧ್ಯತೆಯಿದೆ.



ಈ ಹಿಂದೆ ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲೆಗಳನ್ನು ರಚಿಸಲು ಸರಕಾರ ಮುಂದಾದಾಗ ಬೈಲಹೊಂಗಲ ಮತ್ತು ಸವದತ್ತಿ ಭಾಗದವರು ವಿರೋಧಿಸಿದ್ದರು. ಬೈಲಹೊಂಗಲದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳೂ ಜರುಗಿದ್ದವು.



ಗೋಕಾಕ ನಗರ ಬೆಳಗಾವಿ ಜಿಲ್ಲೆಯಲ್ಲೇ ಅತೀ ದೊಡ್ಡ ನಗರವಾಗಿದ್ದು ಚಿಕ್ಕೋಡಿ ನಗರಕ್ಕಿಂತ ಮೂರು ಪಟ್ಟು ದೊಡ್ಡದಿದೆ. ಭೌಗೋಳಿಕವಾಗಿ ಸಹ ಜಿಲ್ಲೆ ನಿರ್ಮಾಣಕ್ಕೆ  ಗೋಕಾಕ ಸೂಕ್ತವಾಗಿದೆ ಎಂದು ಗೋಕಾಕ ಜನರು ಹರ್ಷ ವ್ಯಕ್ತಪಡಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ