ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿಜಾಬ್ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ 

ನವದೆಹಲಿ: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್​ ಧರಿಸುವುದನ್ನು ನಿಷೇಧಿಸಿ ಹೈಕೋರ್ಟ ನೀಡಿದ​ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ಸುಪ್ರೀಮ ಕೋರ್ಟ​ನಲ್ಲಿಂದು ನಡೆಯಿತು. ವಾದ- ಪ್ರತಿವಾದಿಗಳ ಬಳಿಕ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಹಿರಿಯ ವಕೀಲ ದೇವದತ್​ ಕಾಮತ​ ಅವರು, ಬಟ್ಟೆಯ ವಿಚಾರದಲ್ಲಿ ಸರ್ಕಾರ ಮಕ್ಕಳ ಶಿಕ್ಷಣವನ್ನು ಹಾಳು ಮಾಡುತ್ತಿದೆ ಎಂದು ದೂರಿದರು. ಈ ವೇಳೆ ಪೀಠ, ಮಕ್ಕಳು ಶಾಲೆಯೊಳಗೆ ಮಿಡಿ, ಸ್ಕರ್ಟ್​ ಧರಿಸಿ ಬರಬಹುದೇ ಎಂದು ಪ್ರಶ್ನಿಸಿದ್ದರು. ಹೀಗಾಗಿ ಶಿಕ್ಷಣಕ್ಕೂ, ಬಟ್ಟೆಗೂ ಸಂಬಂಧವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.

ನಿನ್ನೆ ನಡೆದ ಎರಡನೇ ದಿನದ ವಿಚಾರಣೆಯಲ್ಲಿ ಹಿಜಾಬ್​ ಧರಿಸುವುದು ಹಕ್ಕು ಎಂದು ವಾದ ಮಂಡಿಸಿದಾಗ ಕೋರ್ಟ​, ಧರಿಸುವ ಹಕ್ಕಿದ್ದರೆ, ಅದನ್ನು ಧರಿಸದೇ ಇರುವ ಹಕ್ಕೂ ಇದೆ ಎಂದು ನ್ಯಾಯಾಧೀಶರು ಹೇಳಿದ್ದರು. ಮೇಲ್ಮನವಿ ಅರ್ಜಿಗಳನ್ನು ಸುಪ್ರೀಮ ಕೋರ್ಟ ನ್ಯಾಯಮೂರ್ತಿಗಳಾದ ಹೇಮಂತ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ವಿಚಾರಣೆ ನಡೆಸಿತು.

 

 
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.