LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹುಬ್ಬಳ್ಳಿ–ದಾದರ್ ರೈಲು ಖಾನಾಪುರದಲ್ಲೂ ನಿಲುಗಡೆ

ಬೆಳಗಾವಿ: ಪ್ರಯಾಣಿಕರ ಅನುಕೂಲಕ್ಕಾಗಿ SSS ಹುಬ್ಬಳ್ಳಿ–ದಾದರ–SSS ಹುಬ್ಬಳ್ಳಿ ಎಕ್ಸ್‌ಪ್ರೆಸ್ ಖಾನಾಪುರದಲ್ಲಿ ಒಂದು ನಿಮಿಷ ನಿಲುಗಡೆಯಾಗಲಿದೆ.



ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯು ಖಾನಾಪುರ (KNP) ರೈಲು ನಿಲ್ದಾಣದಲ್ಲಿ ದಿನಾಂಕ 15.09.2025 ರಿಂದ ರೈಲು ಸಂಖ್ಯೆ 17317/17318 SSS ಹುಬ್ಬಳ್ಳಿ–ದಾದರ–SSS ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲುಗಳಿಗೆ ಒಂದು ನಿಮಿಷ ನಿಲುಗಡೆ ನೀಡಿದೆ. ರೈಲು ಸಂಖ್ಯೆ 17317 (SSS ಹುಬ್ಬಳ್ಳಿ–ದಾದರ) 17:59 ಕ್ಕೆ ಖಾನಾಪುರ ತಲುಪಿ 18:00 ಕ್ಕೆ ನಿರ್ಗಮಿಸಲಿದೆ. ಅದೇ ರೀತಿ ದಿನಾಂಕ 16.09.2025 ರಂದು ರೈಲು ಸಂಖ್ಯೆ 17318 (ದಾದರ–SSS ಹುಬ್ಬಳ್ಳಿ) 08:40 ಕ್ಕೆ ಖಾನಾಪುರ ತಲುಪಿ 08:41 ಕ್ಕೆ ನಿರ್ಗಮಿಸಲಿದೆ. ಪ್ರಯಾಣಿಕರು ಈ ನಿಲುಗಡೆಯ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಕೋರಲಾಗಿದೆ.



ಸೋಮವಾರ ಕಾರ್ಯಕ್ರಮ :

ಸೆಪ್ಟೆಂಬರ್ 15ರಂದು ಖಾನಾಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ರೈಲು ನಿಲುಗಡೆಗೆ ಹಸಿರು ನಿಶಾನೆ ತೋರಲಿದ್ದಾರೆ. ಖಾನಾಪುರ ತಾಲೂಕಿನಲ್ಲಿ ಕೇಂದ್ರ ಸರಕಾರದ ಯೋಜನೆಗಳನ್ನು ಜಾರಿಗೆ ತರಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿಶೇಷ ಪ್ರಯತ್ನ ಮಾಡಿದ್ದಾರೆ. ಖಾನಾಪುರ ರೈಲ್ವೆ ನಿಲ್ದಾಣದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸುವ ಜೊತೆಗೆ ಹುಬ್ಬಳ್ಳಿ- ದಾದರ್ ರೈಲು ನಿಲುಗಡೆಗೆ ಅವರು ಕೇಂದ್ರ ರೈಲ್ವೆ ಸಚಿವರಿಗೆ ಮನವರಿಕೆ ಮಾಡಿ ಈ ಭಾಗದ ಜನತೆಗೆ ಅನುಕೂಲತೆ ಮಾಡಿಕೊಟ್ಟಿದ್ದಾರೆ ಎಂದು ಶಾಸಕ ವಿಠ್ಠಲ ಹಲಗೇಕರ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ