LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಮ್ಮನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಿ; ಬೆಳಗಾವಿಯಲ್ಲಿ ಜತ್ತ ಕನ್ನಡಿಗರ ಮನವಿ

ಬೆಳಗಾವಿ : ಮಹಾರಾಷ್ಟ್ರದ ಗಡಿಯ ಕನ್ನಡ ಪ್ರದೇಶಗಳು ಅನಾಥಪ್ರಜ್ಞೆ ಅನುಭವಿಸುತ್ತಿವೆ, ಮಹಾರಾಷ್ಟ್ರ ಸರ್ಕಾರ ಈ ಪ್ರದೇಶಗಳನ್ನು ಉದ್ದೇಶ ಪೂರ್ವಕವಾಗಿ ನಿರ್ಲಕ್ಷಿಸಿದೆ. ರಸ್ತೆ, ನೀರು, ವಿದ್ಯುತ್ ಮುಂತಾದ ಮೂಲಭೂತ ಸೌಲಭ್ಯಗಳಲ್ಲದೇ ಕನ್ನಡ ಶಾಲೆಗಳಿಗೆ ಶಿಕ್ಷಕರ ತೀವ್ರ ಕೊರತೆಯಿದೆ, ಮಕ್ಕಳಿಗೆ ಪಠ್ಯ ಪುಸ್ತಕಗಳೂ ಸರಿಯಾದ ಸಮಯಕ್ಕೆ ಲಭ್ಯವಾಗುವುದಿಲ್ಲ, ಹಾಗಾಗಿ ಕರ್ನಾಟಕ ಆಸಕ್ತಿ ವಹಿಸಿ ತಮ್ಮನ್ನು ಕರ್ನಾಟಕದಲ್ಲಿ ಸೇರಿಸಿಕೊಳ್ಳಬೇಕು ಎಂದು ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಕನ್ನಡ ಪ್ರಮುಖರು ರಾಜ್ಯ ಸರಕಾರವನ್ನು ಆಗ್ರಹಿಸಿದರು.



ಬೆಳಗಾವಿಯಲ್ಲಿ ಕರ್ನಾಟಕ ನವನಿರ್ಮಾಣ ಸೇನೆಯ ಆಶ್ರಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜತ್ತ ತಾಲ್ಲೂಕು ಕನ್ನಡ ಹೋರಾಟ ಸಮಿತಿಯ ಸೋಮಲಿಂಗ ಚೌಧರಿ ಮತ್ತು ಗೌಡೇಶ ಮಾಡಳ್ಳಿ ಅವರುಗಳು, ಕರ್ನಾಟಕದ ಇತಿಹಾಸದಲ್ಲೇ ಮುಖ್ಯಮಂತ್ರಿಯಾದವರು ನಮ್ಮ ಪರವಾಗಿ ಮಾತನಾಡಿದ್ದಾರೆ. ಅದಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಫೆಬ್ರವರಿ ತಿಂಗಳಿನಲ್ಲಿ ಜತ್ತನಲ್ಲಿ ಸತ್ಕರಿಸಲಾಗುವದು ಎಂದು ತಿಳಿಸಿದರು.



ಜತ್ತನಿಂದ ವಿಜಯಪುರಗೆ 27 ಕಿಮಿ ಅಂತರ ಇದೆ. ನಾವು ಮಹಾರಾಷ್ಟ್ರ ಗಡಿಯಿಂದ ಕರ್ನಾಟಕ ವಿಜಯಪುರ ಜಿಲ್ಲೆ ಗಡಿಗೆ ಬಂದು ನೀರು ತೆಗೆದುಕೊಂಡು ಹೋಗುತ್ತೇವೆ ಎಂದರು.



ಮೈಸಾಳ ನೀರಾವರಿ ಯೋಜನೆ ಜಾರಿಗೆ ತಂದಿಲ್ಲ. ಗಡಿ ಭಾಗದ ಕನ್ನಡ ಪ್ರದೇಶದಲ್ಲಿ ರಸ್ತೆಗಳು ಹಾಳಾಗಿವೆ. 215 ಕನ್ನಡ ಶಾಲೆಗಳಿವೆ, 200 ಮಕ್ಕಳಿಗೆ ಒಬ್ಬ ಕನ್ನಡ ಶಿಕ್ಷಕರಿದ್ದಾರೆ. ಹೀಗಾಗಿ ಮಹಾರಾಷ್ಟ್ರದಲ್ಲಿ ನಮಗೆ ಸೌಲಭ್ಯ ಸಿಗುತ್ತಿಲ್ಲ. ನಾವು ಮಹಾರಾಷ್ಟ್ರದಲ್ಲಿ ಇರೊಲ್ಲ ಕರ್ನಾಟಕಕ್ಕೆ ಸೇರ್ಪಡೆ ಆಗ್ತಿವಿ. ನಮ್ಮನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಿಕೊಳ್ಳಿ ಎಂದು ಅವರು ಮನವಿ ಮಾಡಿಕೊಂಡರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ