LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಶಬರಿಮಲೆ ಕುರಿತು ಮಾಹಿತಿ

ಅಯ್ಯಪ್ಪನ ಆರಾಧನೆಗಾಗಿಯೇ ವಿೂಸಲಾಗಿರುವ ಕೇರಳದ ದೇವಾಲಯಗಳಲ್ಲಿ ಶಬರಿಮಲೆಯ ಶ್ರೀ ಧರ್ಮಶಾಸ್ತ ದೇವಾಲಯವು ಸುಪ್ರಸಿದ್ಧವಾದುದು ಮತ್ತು ಪ್ರಧಾನವಾದುದು. ಈ ದೇವಾಲಯವು ಪಟ್ಟಣಂತಿಟ್ಟ ಜಿಲ್ಲೆಯ ಪ್ರಸಿದ್ಧವಾದ ಬೆಟ್ಟದ ತುದಿಯಲ್ಲಿದ್ದು ಸಮುದ್ರ ಮಟ್ಟದಿಂದ ಸುಮಾರು 3000 ಅಡಿ ಎತ್ತರದಲ್ಲಿದೆ.



ಎಲ್ಲಾ ಮತಗಳಿಗೆ ಸೇರಿದವರಿಗೂ ಇಲ್ಲಿ ಪ್ರವೇಶಾವಕಾಶವಿದೆ. ಸನ್ನಿಧಾನದ ಪೂರ್ವಕ್ಕೆ ಸ್ವಾಮಿ ಅಯ್ಯಪ್ಪನ ಆತ್ಮೀಯ ಮಿತ್ರನಾದ ವಾವರನಿಗೆ ಸಮರ್ಪಿತವಾದ ವಾವರನಡ ಇದೆ. ಇದು ಮತೀಯ ಸಾಮರಸ್ಯಕ್ಕೆ ಒಂದು ನಿದರ್ಶನವಾಗಿದೆ. ಅಯ್ಯಪ್ಪ ಸ್ವಾಮಿಯ ದೇವಾಲಯವು ವರ್ಷದ ಎಲ್ಲಾ ದಿನಗಳಲ್ಲಿಯೂ ತೆರೆದಿರುವುದಿಲ್ಲ ಎಂಬುದು ಈ ಪುಣ್ಯಕ್ಷೇತ್ರದ ವಿಶೇಷತೆಯಾಗಿದೆ.



ಮಂಡಲಪೂಜೆಯ ಸಮಯದಲ್ಲಿ ಮತ್ತು ಮಕರವಿಳಕ್ಕು, ವಿಶು ಎಂಬೀ ವಿಶೇಷ ಸಂದರ್ಭಗಳಲ್ಲಿ ಹಾಗೂ ಪ್ರತಿಯೊಂದು ಸೌರಮಾನ ತಿಂಗಳ ಮೊದಲ ದಿನಗಳಲ್ಲಿ ಮಾತ್ರ ಇಲ್ಲಿ ಪೂಜೆಗಾಗಿ ದೇವರ ‘ನಡೆ’ ತೆರೆದಿರುತ್ತದೆ.



ತೀರ್ಥಯಾತ್ರಿಕರು 41 ದಿನಗಳ ಕಾಲ ವ್ರತಾನುಷ್ಠಾನ ಮಾಡಿಯೇ ಶಬರಿಮಲೆ ಸ್ವಾಮಿಯ ದರ್ಶನ ಮಾಡಬೇಕೆಂಬುದು ಜನರ ನಂಬಿಕೆ. ತೀರ್ಥಯಾತ್ರಿಕರು ಸಾಂಪ್ರದಾಯಿಕವಾದ ಅರಣ್ಯ ಮಾರ್ಗದ ಮೂಲಕ ಶಬರಿಮಲೆಗೆ ಹೋಗುತ್ತಾರೆ. ಪಂಬೆಯಿಂದ ದೇವಾಲಯದತ್ತ ಸಾಗುವ ದಾರಿ ಇತರ ದಾರಿಗಳಿಗೆ ಹೋಲಿಸಿದಲ್ಲಿ ಹೆಚ್ಚು ಸುಗಮವಾದುದು.



ನಾಗರಾಜ: ಅಯ್ಯಪ್ಪ ಸ್ವಾಮಿಯ ಶ್ರೀಕೋವಿಲ್ (ಪ್ರಧಾನ ಗರ್ಭಗುಡಿ) ಸಮೀಪದಲ್ಲಿಯೇ ನಾಗರಾಜನನ್ನು ಪ್ರತಿಷ್ಠಾಪಿಸಲಾಗಿದೆ. ತೀರ್ಥಯಾತ್ರಿಕರು ಅಯ್ಯಪ್ಪ ಸ್ವಾಮಿ ಮತ್ತು ಕನ್ನಿಮೂಲಗಣಪತಿಯ ದರ್ಶನ ಮಾಡಿದ ಬಳಿಕ ನಾಗರಾಜನಿಗೆ ಪೂಜೆ ಸಲ್ಲಿಸುತ್ತಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ