ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ನಿಷೇಧಾಜ್ಞೆ ಜಾರಿ

ಕೊಲ್ಲಾಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಮಹಾರಾಷ್ಟ್ರ ಭಾಗದಲ್ಲಿ ಪ್ರತಿಭಟನೆ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೊಲ್ಲಾಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.

ಗಡಿ ವಿವಾದ ವಿಚಾರವಾಗಿ ಮಹಾವಿಕಾಸ ಅಘಾಡಿ ಕಾರ್ಯಕರ್ತರು ಧರಣಿ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊಲ್ಲಾಪುರದಲ್ಲಿ ಡಿಸೆಂಬರ್ 23ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮಹಾವಿಕಾಸ ಅಘಾಡಿ ಕಾರ್ಯಕರ್ತರ ಧರಣಿ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿದ್ದು, ಮುಂಜಾಗೃತಾ ಕ್ರಮವಾಗಿ ಡಿಸೆಂಬರ್ 9ರಿಂದ ಡಿಸೆಂಬರ್ 23ರವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೊಲ್ಲಾಪುರದಾದ್ಯಂತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.